ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚತುರ್ಥ ಚಾತುರ್ಮಾಸ್ಯ ವೃತಾಚರಣೆಯ ಯಶಸ್ವಿಗಾಗಿ ಕಾಸರಗೋಡು ಪ್ರಾದೇಶಿಕ ಸಮಿತಿ ಸಭೆ ನಡೆಯಿತು.
ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ಅಧ್ಯಕ್ಷತೆಯಲ್ಲಿ ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಚಾತುರ್ಮಾಸ್ಯ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಚಾತುರ್ಮಾಸ್ಯದ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಪ್ರಾದೇಶಿಕ ಸಮಿತಿ ರಚಿಸಲಾಯಿತು. ರಕ್ಷಾಧಿಕಾರಿಯಾಗಿ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ, ಗೌರವಾಧ್ಯಕ್ಷರಾಗಿ ಶ್ರೀ ರಾಮ್ ಪ್ರಸಾದ್, ಅಧ್ಯಕ್ಷರಾಗಿ ಶ್ರೀ ಕೆ.ಎನ್. ವೆಂಕಟ್ರಮಣ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಕೂಡ್ಲು, ಕೋಶಾಧಿಕಾರಿಯಾಗಿ ಗುರುಪ್ರಸಾದ್ ಕೋಟೆಕಣಿ ಹಾಗೂ ಸಭೆಯಲ್ಲಿ ಉಪಸ್ಥಿತರಿದ್ದ ಸರ್ವರನ್ನು ಸದಸ್ಯರನ್ನಾಗಿ ಆರಿಸಲಾಯಿತು ಆಗಸ್ಟ್ 25 ರಂದು ಹೊರೆಕಾಣಿಕೆ ಸಮರ್ಪಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರು ಶುಭನುಡಿಗಳನ್ನಾಡಿದರು. ಶ್ರೀ ಕೆ.ಎನ್. ವೆಂಕಟ್ರಮಣ ಹೊಳ್ಳ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಮ್ ಪ್ರಸಾದ್ ಸ್ವಾಗತಿಸಿ ಗುರುಪ್ರಸಾದ್ ಕೋಟೆಕಣಿ ವಂದಿಸಿದರು.