ಉಡುಪಿ: ಹಿರಿಯಡಕ ಜಿಲ್ಲಾ ಕಾರಾಗೃಹದಲ್ಲಿ ಕೈದಿಯೊಬ್ಬ ಸಹಕೈದಿಗೆ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಕಾರಾಗೃಹದಲ್ಲಿರುವ ವಿಚಾರಣಾ ಖೈದಿ ಇಸಾಕ್ ಎಂಬುವವನು ಸಹಕೈದಿ ರವಿಚಂದ್ರನ್ ಎಂಬಾತನ ಮೇಲೆ ಕೈಯಲ್ಲಿ ಸ್ಟೀಲ್ ಚೆಂಬು ಸಿಕ್ಕಿಸಿಕೊಂಡು ಹಿಂದಿನಿಂದ ತಲೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಕರ್ತವ್ಯ ನಿರತ ಸಿಬ್ಬಂದಿ ವಿಚಾರಿಸಿದಾಗ ಈತ ರೂಮಿನಲ್ಲಿ ವಾಕಿಂಗ್ ಮಾಡುತ್ತಿದ್ದಾನೆಂಬ ಕ್ಷುಲ್ಲಕ ಕಾರಣ ನೀಡಿದ್ದಾನೆ. ಹಲ್ಲೆಗೊಳಗಾದ ರವಿಚಂದ್ರನ್ ಎಂಬಾತನನ್ನು ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇಸಾಕ್ ವಿನಾ ಕಾರಣ ಸಹಬಂಧಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದು ಕಾರಾಗೃಹ ನಿಯಮಗಳನ್ನು ಉಲ್ಲಂಘನೆ ಮಾಡಿರುವುದಾಗಿ ಕಾರಾಗೃಹ ಅಧೀಕ್ಷಕರು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.