ಚಿತ್ರದುರ್ಗ: ನಟ ದರ್ಶನ್ ಗ್ಯಾಂಗ್ನಿಂದ ಹತ್ಯೆಗೀಡಾದ ರೇಣುಕಾಸ್ವಾಮಿ ಅವರ ನಿವಾಸಕ್ಕೆ ಫಿಲಂ ಚೇಂಬರ್ ನಿಯೋಗ ಇಂದು ಭೇಟಿ ನೀಡಿತ್ತು. ಈ ವೇಳೆ ರೇಣುಕಾಸ್ವಾಮಿ ಕುಟುಂಬಕ್ಕೆ ಧೈರ್ಯ ತುಂಬಿ, ವಾಣಿಜ್ಯ ಮಂಡಳಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಯಿತು. ಮುಂದೆ ಯಾವ ಸಹಕಾರ ಬೇಕೆಂಬುದನ್ನು ನೋಡಿಕೊಂಡು ಶಾಶ್ವತ ಪರಿಹಾರ ಕೊಡಿಸುವ ಭರವಸೆಯನ್ನು ಚೇಂಬರ್ ಅಧ್ಯಕ್ಷ ಭರವಸೆ ನೀಡಿದರು.
ತಪ್ಪು ಮಾಡುವುದು ಮನುಷ್ಯನ ಸಹಜ ಗುಣ. ಆದರೆ ಈ ರೀತಿಯಾಗಬಾರದಿತ್ತು. ಇದಕ್ಕೆ ಚಿತ್ರರಂಗ ಹೊಣೆ ಅಲ್ಲ. ಆದರೆ ಅವರೊಬ್ಬರಿಂದ ನಾವೆಲ್ಲ ತಲೆ ತಗ್ಗಿಸುವ ಕೆಲಸವಾಗಿದೆ ಎಂದು ಫಿಲಂ ಚೇಂಬರ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಹೇಳಿದ್ದಾರೆ.