ಮಲ್ಪೆ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ವೇಳೆ ವ್ಯಕ್ತಿಯೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಏ.27ರಂದು ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಕುಂದಾಪುರ ಕೋಣೆ ಗ್ರಾಮದ 40 ವರ್ಷದ ನಾರಾಯಣ ಮೃತಪಟ್ಟ ದುರ್ದೈವಿ.
ನಾರಾಯಣ ಅವರು ಏ.24ರಂದು ಮೀನುಗಾರಿಕೆಗೆ ತೆರಳಿದ್ದರು. ಬಲೆ ಎಳೆಯುವ ಸಮಯದಲ್ಲಿ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದರು ಎನ್ನಲಾಗಿದೆ. ಮೃತದೇಹವನ್ನು ಟೆಬ್ಮಾ ಶಿಪ್ ಯಾರ್ಡ್ ಬಳಿ ದಡಕ್ಕೆ ತರಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.