ಲಕ್ನೋ: ಚಲಿಸುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಲೇ ಬಸ್ ಸುಟ್ಟು ಭಸ್ಮವಾಗಿದೆ. ಇಬ್ಬರು ಮಕ್ಕಳು ಸೇರಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಸಮಯದಲ್ಲಿ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದರು. ಬಸ್ನಲ್ಲಿ ಹೊಗೆ ತುಂಬಲು ಪ್ರಾರಂಭಿಸಿದ ನಂತರವೇ ಅವರು ಎಚ್ಚರಗೊಂಡರು. ಆಘಾತಕಾರಿ ಸಂಗತಿಯೆಂದರೆ, ಚಾಲಕ ಕಿಟಕಿ ಒಡೆದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ 30 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು, ಆದರೆ ಆ ಹೊತ್ತಿಗೆ ಇಡೀ ಬಸ್ ಸುಟ್ಟು ಭಸ್ಮವಾಗಿತ್ತು.