Sunday, January 19, 2025
Homeತುಳುನಾಡುಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರ್ಪಡೆ

ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರ್ಪಡೆ


ಬೆಂಗಳೂರು: ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬುಧವಾರ ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರಿದರು.
ಚುನಾವಣೆಯ ಸಂದರ್ಭ ಅಖಂಡ ಶ್ರೀನಿವಾಸ ಮೂರ್ತಿ ಪಕ್ಷ ಸೇರ್ಪಡೆ ಪಕ್ಷಕ್ಕೆ ದೊಡ್ಡ ಶಕ್ತಿ ಕೊಟ್ಟಂತಾಗಿದೆ. ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಾಟೆ ಆದಾಗ ಅಖಂಡ ಶ್ರೀನಿವಾಸಮೂರ್ತಿಯವರ ಮನೆಯನ್ನು ಸುಡಲಾಗಿತ್ತು. ಆಗ ಕಾಂಗ್ರೆಸ್ ನವರು ಬೆಂಬಲಿಸಲಿಲ್ಲ. ನಾವು ಆಗ ಅವರ ಜೊತೆ ಗಟ್ಟಿಯಾಗಿ ನಿಂತಿದ್ದೆವು ಎಂದು ಯಡಿಯೂರಪ್ಪ ಈ ವೇಳೆ ಮಾತನಾಡುತ್ತಾ ಹೇಳಿದರು.
ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಮಾಝಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular