Friday, May 23, 2025
Homeಅಪರಾಧಗೋವುಗಳ ಬಲಿಕೊಡುವ ಕೃತ್ಯದಲ್ಲಿ ನಾಲ್ಕು ಮಂದಿ ಬಂಧನ

ಗೋವುಗಳ ಬಲಿಕೊಡುವ ಕೃತ್ಯದಲ್ಲಿ ನಾಲ್ಕು ಮಂದಿ ಬಂಧನ

ಮಂಗಳೂರು: ಕಳವುಗೈದ ದನಗಳನ್ನು ಬಲಿಕೊಡಲು ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಣ್ಣೂರು ಕುಂಡಾಲದ ಬದ್ರುದ್ದೀನ್ (65), ಅಬ್ದುಲ್ ಮಜೀದ್ (43), ಖಲೀಲ್ (35), ಮತ್ತು ಹರೇಕಳದ ಮುಹಮ್ಮದ್ (56) ಬಂಧಿತ ಆರೋಪಿಗಳಾಗಿದ್ದಾರೆ.

ಕುಂಡಾಲದಲ್ಲಿರುವ ಬದ್ರುದ್ದೀನ್‌ನ ಮನೆಯಲ್ಲಿ ಆರೋಪಿಗಳು ಕಳವು ಮಾಡಿಕೊಂಡು ಬಂದ ದನಗಳನ್ನು ಬಲಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುಮಾರು 32,850 ರೂಪಾಯಿಗಳ ಮೌಲ್ಯದ ಮಾಂಸ ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ 5 ಮಂದಿ ಆರೋಪಿಗಳಿದ್ದು, ಅವರ ಬಂಧನಕ್ಕೆ ಪ್ರಯತ್ನ ಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular