Saturday, April 26, 2025
Homeದಾವಣಗೆರೆಏಪ್ರಿಲ್ 13 ರಂದು ಓಂ ಚಂಡಿಕಾ ಸೇವಾ ಟ್ರಸ್ಟ್ನಿಂದ ಉಚಿತ ಮಧುಮೇಹ ನಿರ್ಮೂಲನ ಉದ್ಘಾಟನಾ ಸಮಾರಂಭ

ಏಪ್ರಿಲ್ 13 ರಂದು ಓಂ ಚಂಡಿಕಾ ಸೇವಾ ಟ್ರಸ್ಟ್ನಿಂದ ಉಚಿತ ಮಧುಮೇಹ ನಿರ್ಮೂಲನ ಉದ್ಘಾಟನಾ ಸಮಾರಂಭ


ದಾವಣಗೆರೆ:ದಾವಣಗೆರೆಯ ಶ್ರೀ ಚಂಡಿಕಾಶ್ರಮದ ಓಂ ಚಂಡಿಕಾ ಸೇವಾ ಟ್ರಸ್ಟ್ ಆಶ್ರಯದಲ್ಲಿ ಏಪ್ರಿಲ್ 13 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಕೆ.ಎಸ್.ಆರ್.ಟಿ.ಸಿ ಹೊಸ ನಿಲ್ದಾಣದ ಹಿಂಭಾಗ ಭಗತ್‌ಸಿಂಗ್ ನಗರದ ಶ್ರೀ ಚಂಡಿಕಾಶ್ರಮದ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಉಚಿತ ಮಧುಮೇಹ ನಿರ್ಮೂಲನ ಅಂದೋಲನ ಕಾರ್ಯಾಗಾರ ಸಮಾರಂಭ ಉದ್ಘಾಟನೆಯಾಗಲಿದೆ ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕೌಶಲ್ಯ ಬಾಯಿ ಎನ್. ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಶ್ರೀ ಗಾಯತ್ರಿ ಪರಿವಾರದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷರೂ, ಸಂಸ್ಥಾಪಕರಾದ ಅಘೋರಿ ಚಿದಂಬರ ಯೋಗಿಯವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರದ ವಿಮೋಚನಾ ಕಿವುಡ, ಮೂಗರ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಪ್ರಭಾ ರವೀಂದ್ರ, ಕಲಾಕುಂಚ ಸಿದ್ಧವೀರಪ್ಪ ಬಡಾವಣೆ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್, ದಾವಣಗೆರೆಯ ಡಿ.ಸಿ.ಎಂ.ಟೌನ್‌ಶಿಪ್ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಶಾರದಮ್ಮ ಶಿವನಪ್ಪ ಆಗಮಿಸಲಿದ್ದಾರೆ.
ಆರೋಗ್ಯ ಕಾಳಜಿಯ ಆಧ್ಯಾತ್ಮ ಪರಂಪರೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ಕಾರ್ಯಾಗಾರ ಯಶಸ್ವಿಗೊಳಿಸಬೇಕಾಗಿ ಟ್ರಸ್ಟ್ನ ಸಮಿತಿಯವರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9380389236 ಈ ವ್ಯಾಟ್ಸಪ್ ಸಂಖ್ಯೆಗೆ ಸಂಪರ್ಕಿಸಬಹುದು.

RELATED ARTICLES
- Advertisment -
Google search engine

Most Popular