ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ,ಕಂಟಿಕ ಇಲ್ಲಿ ವಿಷನ್ ಸ್ಟ್ರಿಂಗ್ ದೆಹಲಿ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ಆದಿತ್ಯವಾರ ಜರಗಿತು
ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿ ತಪಾಸಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ರಾಜೇಶ್,ಎಸ್.ಡಿ ಎಂ.ಸಿ ಅಧ್ಯಕ್ಷ ರಾಜೇಶ್,ನೇತ್ರಧಿಕಾರಿ ಹರ್ಷಿತಾ, ಹೊರ ಸಂಪರ್ಕ ಅಧಿಕಾರಿ ಜಯಪಾಲ್, ಸಹಾಯಕರಾದ ಲಾವಣ್ಯ, ಧನ್ಯಶ್ರೀ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 85 ಜನರು ಸದುಪಯೋಗ ಪಡೆದುಕೊಂಡರು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಚೇತನಾ ಸ್ವಾಗತಿಸಿ ವಂದಿಸಿದರು.