ತಾ. 20-03-2025 ಗುರುವಾರ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ, ಕಾಲಭೈರವ ದೇವಸ್ಥಾನ ವತಿಯಿಂದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಲ್ಲಿ ಸನಾತನ ಹಿಂದೂ ಧರ್ಮದ ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಹೆಣ್ಣು ಮಕ್ಕಳ ಭಾಗ್ಯೋದಯದ ಬೆಳಕು ಶ್ರೀ ಸೌಭಾಗ್ಯ ಕಾರ್ಯಕ್ರಮದಡಿಯಲ್ಲಿ 9 ರಿಂದ 19 ವರ್ಷದ 1008 ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ನವರಾತ್ರಿ ದುರ್ಗಾಷ್ಟಮಿಯ ಪರ್ವ ಕಾಲದಲ್ಲಿ ನಡೆಯಲಿದ್ದು ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಉಪಸ್ಥಿತಿಯಲ್ಲಿ ವೀಣಾ ಶೆಟ್ಟಿ ಹಾಗೂ 5 ಕನ್ಯೆಯರಿಂದ ಹಿಂದೂ ಹೆಣ್ಣುಮಕ್ಕಳು ಚುಚ್ಚುವ ಮೂಗುತಿಯ ಮಹತ್ವ ಮಾಹಿತಿ ಪತ್ರ ಬಿಡುಗಡೆ ಶ್ರೀ ಕ್ಷೇತ್ರದಲ್ಲಿ ನಡೆಯಿತು.