ಲಕ್ನೋ: ಅಪ್ರಾಪ್ತ ಬಾಲಕನನ್ನು ಸ್ನೇಹಿತರು ಪಾರ್ಟಿಗೆ ಕರೆದು ಬಳಿಕ ವಿವಸ್ತ್ರಗೊಳಿಸಿ, ಥಳಿಸಿ, ಮೈಮೇಲೆ ಮೂತ್ರ ವಿಸರ್ಜಿಸಿದ್ದಾರೆ. ಇದರಿಂದ ನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಬಾಲಕನ್ನು ಆದಿತ್ಯ ಎಂದು ಗುರುತಿಸಲಾಗಿದೆ. ಈ ಕುರಿತು ಪಿಎಸ್ ಕಪ್ತಂಗಂಜ್ನಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂಬಂಧಿತ ವಿಭಾಗಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಸಾವಿಗೂ ಮುನ್ನ ಆದಿತ್ಯ ತೀವ್ರ ಕಿರುಕುಳ ನೀಡಿದ್ದರು ಎಂದು ಬಾಲಕನ ಕುಟುಂಬದವರು ಆರೋಪಿಸಿದ್ದಾರೆ.
ಆತನ ಚಿಕ್ಕಪ್ಪ ವಿಜಯ್ ಕುಮಾರ್ ಪ್ರಕಾರ, ಅಪ್ರಾಪ್ತ ಬಾಲಕನನ್ನು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸಲಾಗಿತ್ತು, ಅಲ್ಲಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿದ್ದಾರೆ. ಹುಟ್ಟು ಹಬ್ಬದ ಪಾರ್ಟಿಗೆಂದು ಆತನನ್ನು ಆಹ್ವಾನಿಸಿದ್ದು, ಆತನಿಗೆ ಅವಮಾನ ಮಾಡಲಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಪಾರ್ಟಿಗೆ ಕರೆದು ವಿವಸ್ತ್ರಗೊಳಿಸಿ, ಮೈಮೇಲೆ ಮೂತ್ರ ವಿಸರ್ಜಿಸಿದ ಸ್ನೇಹಿತರು: ನೊಂದು ಬಾಲಕ ಆತ್ಮಹತ್ಯೆ
RELATED ARTICLES