ಶೈಕ್ಷಣಿಕ ಕಾಳಜಿಯ ಜಿ. ಕೊಟ್ರೇಶ್ ರವರಿಗೆ ಕಲಾಕುಂಚದಿಂದ ಸನ್ಮಾನ

0
50

ದಾವಣಗೆರೆ-ಡಿಸೆಂಬರ್, ದಾವಣಗೆರೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ. ಕೊಟ್ರೇಶ್ ರವರಿಗೆ ದಾವಣಗೆರೆಯ ಕಲಾಕುಂಚದಿಂದ ಇತ್ತೀಚಿಗೆ ಕುವೆಂಪು ಕನ್ನಡ ಭವನದಲ್ಲಿ ಅವರ ಶೈಕ್ಷಣಿಕ ಕಾಳಜಿಯ ಸಾಧನೆಗೆ ಸನ್ಮಾನಿಸಿ ಗೌರವಿಸಲಾಯಿತು ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ತಿಳಿಸಿದ್ದಾರೆ.

ವೇದಿಕೆಯಲ್ಲಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ , ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಕಲಾಕುಂಚದ ವಿದ್ಯಾನಗರ ಶಾಖೆಯ ಅಧ್ಯಕ್ಷರಾದ ರಾಜಶೇಖರ್ ಬೆನ್ನೂರು, ಕಲಾಕುಂಚದ ಡಿ.ಸಿ.ಎಂ. ಶಾಖೆಯ ಅಧ್ಯಕ್ಷರಾದ ಶಾರದಮ್ಮ ಶಿನವಪ್ಪ ದಂಪತಿಗಳು, ಕಲಾಕುಂಚದ ಎಲೆಬೇತೂರು ಶಾಖೆಯ ಅಧ್ಯಕ್ಷರಾದ ಡಾ|| ನಿರ್ಮಲಾ ವಿಶ್ವನಾಥ್ ಕುಲಕರ್ಣಿ, ಕಲಾಕುಂಚ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಚನ್ನಬಸಪ್ಪ, ಸ್ವರ್ಣಲತಾ, ನಂಜಮ್ಮ ಮುಂತಾದವರು ಉಪಸ್ಥಿತರಿದ್ದು ಅಭಿಮಾನದಿಂದ ಅಭಿನಂದಿಸಿದರು.

LEAVE A REPLY

Please enter your comment!
Please enter your name here