Wednesday, January 15, 2025
Homeಉಡುಪಿಗಂಗೊಳ್ಳಿ ಗ್ರಾ.ಪಂ. ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯಿಂದ ಪ್ರಾರ್ಥನೆ: ಹಿಂದೂ ಸಂಘಟನೆಗಳ ಅಸಮಾಧಾನ

ಗಂಗೊಳ್ಳಿ ಗ್ರಾ.ಪಂ. ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯಿಂದ ಪ್ರಾರ್ಥನೆ: ಹಿಂದೂ ಸಂಘಟನೆಗಳ ಅಸಮಾಧಾನ

ಉಡುಪಿ: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ಮಾಡಿರುವ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದ್ದು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಪಂಚಾಯತ್ ಉಪಾಧ್ಯಕ್ಷ ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಗಂಗೊಳ್ಳಿಯಲ್ಲಿ ಕಾಂಗ್ರೆಸ್-ಎಸ್‌ಡಿಪಿಐ ಅಧಿಕಾರ ಹಂಚಿಕೆ ವೇಳೆ ಘಟನೆ ನಡೆದಿದೆ. ಗಂಗೊಳ್ಳಿ ಗ್ರಾಮ ಪಂಚಾಯತ್‌ ಮೂರು ದಶಕಗಳ ಬಳಿಕ ಕಾಮಗ್ರೆಸ್‌ ಮತ್ತು ಎಸ್‌ಡಿಪಿಐ ಮೈತ್ರಿಯ ತೆಕ್ಕೆಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಅಧಿಕಾರ ಹಂಚಿಕೆಯಾಗಿದೆ.

ಕಾಂಗ್ರೆಸ್ ಸದಸ್ಯೆ ಜಯಂತಿ ಖಾರ್ವಿ ಎಂಬವರಿಗೆ ಅಧ್ಯಕ್ಷ ಸ್ಥಾನ ಹಾಗೂ ಎಸ್‌ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್‌ಗೆ ಉಪಾಧ್ಯಕ್ಷ ಸ್ಥಾನ ಸಿಕ್ಕಿದೆ. ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ವೇಳೆ ಮೌಲ್ವಿ ಕರೆಸಿ ಪ್ರಾರ್ಥನೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಗುರುವಾರ ಸಂಜೆ ಉಪಾಧ್ಯಕ್ಷ ತಬ್ರೇಸ್ ಮುಸ್ಲಿಂ ಧಾರ್ಮಿಕ ಪ್ರಾರ್ಥನೆ ಮಾಡಿದ ಬಗ್ಗೆ ಅಕ್ಷೇಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಶುಕ್ರವಾರ ಕಾಂಗ್ರೆಸ್ ಸದಸ್ಯರಿಂದ ಗಂಗೊಳ್ಳಿ ಪಂಚಾಯತ್‌ನಲ್ಲಿ ಗಣಪತಿ ಹೋಮ ನಡೆಸಲಾಗಿದೆ.

12 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್‌ಗೆ ಎಸ್‌ಡಿಪಿಐನ ಏಳು ಸದಸ್ಯರು ಬೆಂಬಲ ನೀಡಿದ್ದಾರೆ. ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಬಿಜೆಪಿ 12 ಸದಸ್ಯ ಬಲ ಹೊಂದಿದೆ.

RELATED ARTICLES
- Advertisment -
Google search engine

Most Popular