ಮಕ್ಕಳ ಶಿಸ್ತು ಮತ್ತು ಮೌಲ್ಯಯುತ ಜೀವನಕ್ಕೆ ಸರಕಾರಿ ಶಾಲೆಗಳು ಮೂಲ ಅಡಿಪಾಯ.. ಧನರಾಜ್ ಆಚಾರ್ಯ

0
119

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ

ಕಲ್ಲಡ್ಕ: ಮಕ್ಕಳ ಶಿಸ್ತು ಮತ್ತು ಮೌಲ್ಯಯುತ ಜೀವನಕ್ಕೆ ಸರಕಾರಿ ಶಾಲೆಗಳು ಮೂಲ ಅಡಿಪಾಯವಾಗಿದೆ, ಶಿಕ್ಷಣದ ಜೊತೆಗೆ ಬುದ್ಧಿವಂತಿಗೆ ಬಹಳ ಮುಖ್ಯ, ದಾನಿಗಳು ಸಂಘ-ಸಂಸ್ಥೆಗಳು ಮಾಡುವ ಸಹಕಾರವು ಸರಕಾರಿ ಶಾಲಾ ಮಕ್ಕಳ ಜೀವನಕ್ಕೆ ಕೊಡುವ ಆಸರೆಯಾಗಿದೆ ಎಂದು ಚಲನಚಿತ್ರ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 11 ರ ಸ್ಪರ್ಧಾಳು ಧನರಾಜ್ ಆಚಾರ್ಯ ಹೇಳಿದರು.
ಅವರು ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶೇರಾದಲ್ಲಿ ನಂಬರ್ 29 ಶನಿವಾರ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬೆಳಗ್ಗಿನ ಶಾಲಾ ಧ್ವಜಾರೋಹಣ ಕಾರ್ಯಕ್ರಮವನ್ನು ವರ್ಗಾವಣೆಗೊಂಡ ಶಾಲಾ ಶಿಕ್ಷಕಿ ಜಯಲಕ್ಷ್ಮಿ ಪಿ. ನೆರವೇರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ ರೈ ರವರು ಶಾಲಾ ಕಟ್ಟಡಕ್ಕೆ ಮೇಲ್ಚಾವಣಿ ಶೀಟ್ ಲಯನ್ಸ್ ಕ್ಲಬ್ ಮಾಣಿ ಹೆಸರಿನಲ್ಲಿ ಅಳವಡಿಸಿ ಉದ್ಘಾಟಿಸಿದರು.

ಸಂಜೆ ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಭಾರತಿ ಸುರೇಂದ್ರ ರಾವ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ನಿವೃತ್ತಿ ಹೊಂದಲಿರುವ ಶಿಕ್ಷಕರು ಕೆ. ಗೋಪಾಲಗೌಡ ಹಾಗೂ ವರ್ಗಾವಣೆಗೊಂಡ ಶಿಕ್ಷಕಿ ಜಯಲಕ್ಷ್ಮಿ ಪಿ. ರವರನ್ನು ಗೌರವಿಸಲಾಯಿತು.

ಕಲಿಕೆ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಹಾಗೂ ಮಕ್ಕಳ ಪೋಷಕರಿಗೆ ಮಾಡಿದ ಆಟೋ ಸ್ಪರ್ಧೆಯ ಬಹುಮಾನವನ್ನು ವಿತರಿಸಲಾಯಿತು. ಕಲಿಕೆಯಲ್ಲಿ ವಿಶೇಷ ಮಕ್ಕಳನ್ನು ಗುರುತಿಸಿ ದಾನಿಗಳು ನೀಡಿದ ಪ್ರೋತ್ಸಾಹ ಸಹಾಯಧನ ವಿತರಿಸಲಾಯಿತು.

ಶಾಲೆಗೆ ಸದರಿ ಸಾಲಿನಲ್ಲಿ ಕೊಡುಗೆಗಳನ್ನು ನೀಡಿದ ಮಹನೀಯರಿಗೆ ಸ್ಮರಣೆಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಕಡೇಶಿವಾಲಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಕನ್ನೊಟ್ಟು, ಪಂಚಾಯತ್ ಸದಸ್ಯರಾದ
ಶ್ರೀ ಸುರೇಶ್ ಬನಾರಿ,
ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ ರೈ,ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಗಂಗಾಧರ ಶೇರಾ, ಹಿರಿಯ ವಿದ್ಯಾರ್ಥಿ ಸಂಶುದ್ದೀನ್ ಪಟ್ಲ,
ಮಾಜಿ ಎಸ್‌.ಡಿ.ಎಂ.ಸಿ. ಅಧ್ಯಕ್ಷರು ಚೆನ್ನಪ್ಪ ಎಸ್ ಅಂಚನ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ, ಉಪಾಧ್ಯಕ್ಷೆ.ಶ್ರೀಮತಿ ಉಷಾ,
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಿದಾನಂದ, ಮೊದಲಾದವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪುಟಾಣಿಗಳಿಂದ ಹಾಗೂ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಶಾಲೆಯನ್ನು ಮಕ್ಕಳೇ ತಯಾರಿಸಿದ ಗೂಡು ದೀಪ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತ ಮಾಡಲಾಗಿತ್ತು

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಅನಿತಾ ಕುಮಾರಿ ಸ್ವಾಗತಿಸಿ, ಹಿರಿಯ ಶಿಕ್ಷಕ ಕೆ ಗೋಪಾಲಗೌಡ ವಂದಿಸಿದರು.
ಸಹ ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ಕಾರ್ಯಕ್ರಮ ನಿರೂಪಿಸಿದರು.ಗೌರವ ಶಿಕ್ಷಕಿಯರಾದ ಸುಮಲತಾ, ಸುರಕ್ಷಾ ಮತ್ತು ಅಭಿಜ್ಞಾ ಇವರು ಸಹಕರಿಸಿದರು.

LEAVE A REPLY

Please enter your comment!
Please enter your name here