ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

0
7

ಉಡುಪಿ: ಗುರುಪೂರ್ಣಿಮೆಯ ಪ್ರಯುಕ್ತ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಅಮೋಘ ಸೇವೆ ಸಲ್ಲಿಸಿರುವ ಹಿರಿಯ ವಕೀಲರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗೌರವಪೂರ್ವಕವಾಗಿ ಗುರುವಂದನೆ ಸಲ್ಲಿಸಿ, ಅಭಿನಂದಿಸಲಾಯಿತು.

ಕಾನೂನು ಕ್ಷೇತ್ರದಲ್ಲಿ ತಮ್ಮ ಅಪಾರ ಅನುಭವ ಹಾಗೂ ಜ್ಞಾನದಿಂದ ಶಿಷ್ಯವರ್ಗದವರಿಗೆ ಅಮೂಲ್ಯ ಮಾರ್ಗದರ್ಶನ ನೀಡಿರುವ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆಯವರ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆ ಹಾಗೂ ವಕೀಲ ಸಮುದಾಯಕ್ಕೆ ನೀಡಿದ ಮಾರ್ಗದರ್ಶನವನ್ನು ಪ್ರಶಂಸಿಸಲಾಯಿತು.

ಅಧಿವಕ್ತ ಪರಿಷತ್‌ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಶ್ವೇತಾ ಜೈನ್ ಅವರು ಉಡುಪಿಗೆ ಭೇಟಿ ನೀಡಿ, ಹಿರಿಯ ವಕೀಲರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆಯವರಿಗೆ ಗುರುವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಸಂತೋಷ್ ಹೆಬ್ಬಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರೂರು ಸುಕೇಶ್ ಶೆಟ್ಟಿ, ಸದಸ್ಯರಾದ ಶಶಿರಾಜ್ ಪೈಯಾರ್, ರಾಜೇಶ್ ಎ.ಆರ್., ಗಿರೀಶ್ ಎಸ್.ಪಿ., ನಿತೇಶ್ ಶೆಟ್ಟಿ ಮಟ್ಟಾರ್, ಜಯಂತ್ ರಾವ್, ಸುಚಿತಾ ಅರುಣ್ ಶೆಟ್ಟಿ, ರವೀಂದ್ರ ಬೈಲೂರು, ನಿತೀಶ್ ಶೆಟ್ಟಿ ಮಟ್ಟಾರ್ ಹಾಗೂ ಯತಿರಾಜ್, ಕಾನೂನು ವಿದ್ಯಾರ್ಥಿ ರಕ್ಷಿತ್ ಬೆಳಪು ಹಾಗೂ ಬಿಜೆಪಿ ಓಬಿಸಿ ಮೋರ್ಚಾ ಕಾಪು ಮಂಡಲ ಅಧ್ಯಕ್ಷ ಸಂತೋಷ್ ಮೂಡುಬೆಳ್ಳೆ ಉಪಸ್ಥಿತರಿದ್ದರು.