Friday, May 23, 2025
Homeಅಪರಾಧಬೆಂಗಳೂರು-ಮಂಗಳೂರು ಬಸ್ಸಿನಲ್ಲಿ ಅನ್ಯಕೋಮಿನ ಯುವಕನಿಂದ ಕಿರುಕುಳ: ಯುವತಿಯಿಂದ ದೂರು

ಬೆಂಗಳೂರು-ಮಂಗಳೂರು ಬಸ್ಸಿನಲ್ಲಿ ಅನ್ಯಕೋಮಿನ ಯುವಕನಿಂದ ಕಿರುಕುಳ: ಯುವತಿಯಿಂದ ದೂರು

ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಆಗಮಿಸುತ್ತಿದ್ದ ವೇಳೆ ಹಿಂದೂ ಯುವತಿಯೊಬ್ಬರಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿಗೆ ಯುವತಿ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ್ದಾನೆ. ಇದನ್ನು ಆಕ್ಷೇಪಿಸಿ ಯುವತಿ ಬಸ್ಸು ಸಿಬ್ಬಂದಿ ಗಮನಕ್ಕೆ ತಂದರೂ ಅವರಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ ಎನ್ನಲಾಗಿದೆ. ಬಳಿಕ ಯುವತಿ ಆತನಿಂದ ಆಧಾರ್ ಕಾರ್ಡ್ ಕಿತ್ತುಕೊಂಡಿದ್ದು, ಬಸ್ಸು ನಿಧಾನವಾಗುತ್ತಿದ್ದಂತೆ ಆತ ಬಸ್ಸಿನಿಂದ ಹಾರಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಉಪ್ಪಿನಂಗಡಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖಂಡರುಗಳಾದ ಅರುಣ್ ಕುಮಾರ್ ಪುತ್ತಿಲ, ನಂದನ್ ಮಲ್ಯ, ರಕ್ಷಿತ್ ಕೊಟ್ಟಾರಿ, ಅಜಿತ್ ಬೋಪಯ್ಯ, ಅಭಿಷೇಕ್ ರೈ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular