ಹೆಚ್ಚುತ್ತಿರುವ ಹೃದಯಾಘಾತಗಳು; ಮೈಸೂರು ಜಯದೇವ ಹೃದ್ರೋಗ ಕೇಂದ್ರದಲ್ಲಿ ತಪಾಸಣೆಗೆ ನೂಕುನುಗ್ಗಲು!

0
155

ಮೈಸೂರು: ಹೃದಯಾಘಾತದಿಂದ ಕೇವಲ ಹಾಸನ ಮಾತ್ರವಲ್ಲ, ಬೇರ ಜಿಲ್ಲೆಗಳಲ್ಲೂ ಜನ ಮರಣವನ್ನುಪ್ಪುತ್ತಿದ್ದಾರೆ. ಈ ವಿದ್ಯಮಾನ ಜನರ ನಿದ್ದೆಗೆಡಿಸಿದೆ ಮತ್ತು ತಪಾಸಣೆ ಮಾಡಿಸಿಕೊಳ್ಳಲು ಆಸ್ಪತ್ರೆಗಳಿಗೆ ದೌಡಾಯಿಸುತ್ತಿದ್ದಾರೆ. ನಗರದ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕಂಡುಬಂದ ದೃಶ್ಯವಿದು. ಈ ಗುಂಪಿನಲ್ಲಿ ಎಲ್ಲ ವಯೋಮಾನಗಳ ಜನರಿದ್ದಾರೆ. ಎಲ್ಲರಿಗೂ ತಪಾಸಣೆ ಮಾಡಿಸಿಕೊಳ್ಳುವ ಆತುರ. 40 ವರ್ಷದೊಳಗಿನ ಜನರಲ್ಲಿ ಹೃದಯಾಘಾತಗಳ ಪ್ರಮಾಣ ಶೇಕಡ 50ರಷ್ಟು ಹೆಚ್ಚಿರುವುದು ಜನರಲ್ಲಿ ಆತಂಕಕ್ಕೆ ಕಾಣವಾಗಿದೆ. ಹೃದ್ರೋಗಗಳ ಪರೀಕ್ಷಣೆಗೆ ಅವಶ್ಯವಾಗಿರುವ ಈಸಿಜಿ, ಆ್ಯಂಜಿಯೋಗ್ರಾಮ್, ಡಾಪ್ಲರ್ ಟೆಸ್ಟ್, ಈಟಿಟಿ, ಎಂಆರ್​ಐ, ಸಿಟಿ ಸ್ಕ್ಯಾನ್ ಗಳ ರಿಪೋರ್ಟ್ ಗಳೊಂದಿಗೆ ಜನ ಹೃದಯ ತಜ್ಞರ ಬಳಿ ಹೋಗುತ್ತಿರುವುದು ಸಾಮಾನ್ಯವಾಗಿದೆ.

LEAVE A REPLY

Please enter your comment!
Please enter your name here