ಉಡುಪಿ : ಕಾರ್ಮಿಕರ ದಿನಾಚರಣೆಯ ಅಂಗವಾಗಿ ಉಡುಪಿ ಮುನಿಸಿಪಾಲಿಟಿ ವತಿಯಿಂದ ದೈನಂದಿನ ನಗರ ಸ್ವಚ್ಛತಾ ಕಾರ್ಯ ಮಾಡುತ್ತಿರುವ ಹಿರಿಯ ಕಾರ್ಮಿಕರನ್ನು “ಉಡುಪಿ ಸಿವಿಲ್ ಇಂಜಿನೀಯರ್ಸ್ ಅಸೋಸಿಯೇಷನ್ (ರಿ ) ಸಂಸ್ಥೆಯ ವತಿಯಿಂದ ಗುರುತಿಸಿ ಅವರಿಗೆ ಗೌರವ ಕೊಡುಗೆ ನೀಡಲಾಯಿತು . ಮುಂಜಾನೆ ನಡೆದ ಸಭೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಇ/ಕೆ .ರಂಜನ್ ಮತ್ತು ಪದಾ ಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ನಗರ ಸಭೆಯ ಪೌರಾಯುಕ್ತ ಉದಯ ಶೆಟ್ಟಿ ಮತ್ತು ನಗರ ಸಭೆಯ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿಯವರ ಉಪಸ್ಥಿತಿಯಲ್ಲಿ ಮತ್ತು ಅರೋಗ್ಯ ಅಧಿಕಾರಿ ಪ್ರಕಾಶ್ ಅವರ ನೇತೃತ್ವದಲ್ಲಿ ಕಾರ್ಮಿಕ ದಿನಾಚರಣೆ ಯನ್ನು.
ಸಂಸ್ಥೆಯ ಅಧ್ಯಕರಾದ ಇ /ಕೆ .ರಂಜನ್ ಅವರು ಎಲ್ಲರನ್ನೂ ಸ್ವಾಗತಿಸಿ , ಪೌರ ಕಾರ್ಮಿಕರಿಗೆ ದಿನಸಿ ಕಿಟ್ ಗಳನ್ನು ವಿತರಸಿ , ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಮನವಿ ಮಾಡಿದರು , . ಲಕ್ಷ್ಮೀ ನಾರಾಯಣ ಉಪಾಧ್ಯ , ಹರೀಶ್ ಕುಮಾರ್, ಆರೋಗ್ಯ ಅಧಿಕಾರಿ ಪ್ರಕಾಶ್,ಸಂಘದ ಸದಸ್ಯರು , ನಗರ ಸಭೆಯ ಅಧಿಕಾರಿಗಳು , ಪೌರ ಕಾರ್ಮಿಕರು ಉಪಸ್ಥಿತರಿದ್ದರು.