ಕೃಷಿ ಹೊಂಡದಲ್ಲಿ ದಾರುಣ ಘಟನೆ : ನಾಲ್ವರು ಮಕ್ಕಳು ಜಲಸಮಾಧಿ

0
51

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಭಾನುವಾರ ಸಂಭವಿಸಿದೆ.

ಮೃತ ಮಕ್ಕಳನ್ನು ನಗನೂರಿನ ರಾಜೀವ್ ಬಾಲಪ್ಪ ಅವರ ಮಕ್ಕಳಾದ ಶರತ್(6), ಹನುಮೇಶ್(7), ಮಲ್ಲಪ್ಪ ಬಾಲಪ್ಪ ಅವರ ಪುತ್ರ ಕಿರಣ್​​​(6) ಹಾಗೂ ರಾಜೀವ್ ಅವರ ಸಹೋದರಿ ಗುಬ್ಬಮ್ಮ ಅವರ ಪುತ್ರಿ ಬಸಮ್ಮ(11) ಎಂದು ಗುರುತಿಸಲಾಗಿದೆ.

ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಒಟ್ಟಾಗಿ ಈಜಲು ಹೋಗಿದ್ದರು ಎನ್ನಲಾಗಿದೆ. ರೈತರ ಅನುಕೂಲಕ್ಕಾಗಿ ನಿರ್ಮಿಸಲಾದ ಈ ಕೃಷಿ ಹೊಂಡವು ರಕ್ಷಣಾ ಬೇಲಿ ಇಲ್ಲದೆ ಎಳೆಯ ಕಂದಮ್ಮಗಳ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ.

LEAVE A REPLY

Please enter your comment!
Please enter your name here