ಮಗುವನ್ನು ಮಾರಿ ಮತ್ತೊಂದು ಮದುವೆ : ಪತ್ನಿಯ ದ್ರೋಹಕ್ಕೆ ಮನನೊಂದು ಪತಿ ಆತ್ಮಹತ್ಯೆ

0
13

Hyderabad : Hayathnagar Police Station ವ್ಯಾಪ್ತಿಯ ಕೊಹೆಡಾ ಗ್ರಾಮದಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಪತ್ನಿಯ ದ್ರೋಹ ಮತ್ತು ಕುಟುಂಬ ಭಂಗದಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೃತ ವ್ಯಕ್ತಿಯನ್ನು Govardhan ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ Sarita Goud ಅವರನ್ನು ಪ್ರೀತಿಸಿ ವಿವಾಹವಾಗಿದ್ದ ಗೋವರ್ಧನ್ ದಂಪತಿಗೆ ಗಂಡು ಮಗುವೊಂದು ಜನಿಸಿತ್ತು. ಆರಂಭದಲ್ಲಿ ಇವರ ದಾಂಪತ್ಯ ಜೀವನ ಸುಖಮಯವಾಗಿದ್ದರೂ, ಬಳಿಕ ಭಿನ್ನಾಭಿಪ್ರಾಯಗಳಿಂದ ಜಗಳಗಳು ಹೆಚ್ಚಾಗಿದ್ದವು ಎನ್ನಲಾಗಿದೆ.

ದಿನೇ ದಿನೇ ಹೆಚ್ಚಾಗುತ್ತಿದ್ದ ಕಲಹಗಳಿಂದ ಬೇಸತ್ತ Sarita Goud ಪತಿಯನ್ನು ತೊರೆದು ಮನೆಯಿಂದ ತೆರಳಿದ್ದಳು. ಬಳಿಕ ಆಕೆ ಹೆತ್ತ ಮಗುವನ್ನೇ ಬೇರೆಯವರಿಗೆ ಮಾರಾಟ ಮಾಡಿದ್ದು ಮಾತ್ರವಲ್ಲದೆ, ಗೋವರ್ಧನ್‌ಗೆ ವಿಚ್ಛೇದನ ನೀಡದೆ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಎನ್ನಲಾಗಿದೆ.

ಈ ವಿಚಾರ ತಿಳಿದ ಬಳಿಕ Govardhan ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಪತ್ನಿಯ ವಂಚನೆಯನ್ನು ಸಹಿಸಲಾಗದೆ ಆತ ಆತ್ಮಹತ್ಯೆಗೆ ನಿರ್ಧರಿಸಿದ್ದಾನೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಮುನ್ನ ಗೋವರ್ಧನ್ ಡೆತ್‌ನೋಟ್ ಬರೆದಿದ್ದು, ತನ್ನ ಮೊಬೈಲ್ ಫೋನ್‌ನಲ್ಲಿ ಸೆಲ್ಫಿ ವಿಡಿಯೋ ಕೂಡ ದಾಖಲಿಸಿದ್ದಾನೆ. ಅದರಲ್ಲಿ ತನ್ನ ಸಾವಿಗೆ ಕಾರಣಗಳನ್ನು ವಿವರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ ಜೀವತ್ಯಾಗ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಧಾವಿಸಿದ Hayathnagar Police Station ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತನ ಮೊಬೈಲ್ ಫೋನ್, ಸೆಲ್ಫಿ ವಿಡಿಯೋ, ಫೋಟೋಗಳು ಹಾಗೂ ಡೆತ್‌ನೋಟ್ ಪರಿಶೀಲನೆ ನಡೆಸಲಾಗುತ್ತಿದೆ.

“ಹೆತ್ತ ಮಗುವನ್ನೇ ಮಾರಾಟ ಮಾಡಿ, ಗೋವರ್ಧನ್ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here