Monday, May 12, 2025
Homeದಾವಣಗೆರೆಸಕಾರಾತ್ಮಕ ಚಿಂತನೆಯೊಂದಿಗೆ ಮಕ್ಕಳು ಪರೀಕ್ಷೆ ಎದುರಿಸಿದರೆ ಉತ್ತಮ ಫಲಿತಾಂಶ ಬರುತ್ತದೆ-ಶ್ರೀಮತಿ ಉಮಾ ಪ್ರಶಾಂತ್

ಸಕಾರಾತ್ಮಕ ಚಿಂತನೆಯೊಂದಿಗೆ ಮಕ್ಕಳು ಪರೀಕ್ಷೆ ಎದುರಿಸಿದರೆ ಉತ್ತಮ ಫಲಿತಾಂಶ ಬರುತ್ತದೆ-ಶ್ರೀಮತಿ ಉಮಾ ಪ್ರಶಾಂತ್

ದಾವಣಗೆರೆ-ಡಿಸೆಂಬರ್,
ಮಕ್ಕಳು ಶೈಕ್ಷಣಿಕ ಕಾಳಜಿ ಯೊಂದಿಗೆ ಶಿಕ್ಷಣದ ಕಡೆ ಗುರಿ ಇಟ್ಟುಕೊಂಡು ನಕಾರಾತ್ಮಕ ಬಿಟ್ಟು ಸಕಾರಾತ್ಮಕವಾಗಿ ಚಿಂತೆ ಇಟ್ಟು ಚಿಂತನೆಯೊಂದಿಗೆ ಪರೀಕ್ಷೆ ಎದುರಿಸಿದರೆ ಉತ್ತಮ ಫಲಿತಾಂಶ ಬರುತ್ತದೆ. ಇದರಿಂದಾಗಿ ಪೋಷಕರ ಬಹು ಪರೀಕ್ಷೆಯ ಕನಸು ನನಸಾಗುತ್ತದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮಕ್ಕಳು ಕಷ್ಟ ಪಡದೇ ಇಷ್ಟಪಟ್ಟು ಓದಿ ಪರೀಕ್ಷೆ ಬರೆದರೆ ಅತ್ಯುತ್ತಮ ಫಲಿತಾಂಶ ಬಂದರೆ ತಂದೆ ತಾಯಿಗಳಿಗೆ, ವ್ಯಾಸಂಗ ಮಾಡಿದ ಶಿಕ್ಷಣ ಸಂಸ್ಥೆಗೆ, ದಾವಣಗೆರೆಗೆ ಒಳ್ಳೆಯ ಹೆಸರು ಬರುತ್ತದೆ ಎಂದು ದಾವಣಗೆರೆಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ತಮ್ಮ ಅನಿಸಿಕೆ ಹಂಚಿಕೊಂಡರು.

ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯ ಸಭಾಂಗಣದಲ್ಲಿ ನಿನ್ನೆ ದಿನ 2024- 25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ಮಕ್ಕಳಿಗೆ ಧೈರ್ಯ ತುಂಬುವ ಉತ್ತಮ ಫಲಿತಾಂಶಕ್ಕೆ ಈಗಿನಿಂದಲೇ ಸಂಕಲ್ಪ ಮಾಡುವ ಪೂರ್ವಭಾವಿ ಸಿದ್ದತಾ ಉಚಿತ ಕಾರ್ಯಾಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಕಾರ್ಯಾಗಾರ ನಡೆಸಿಕೊಟ್ಟು ಪೊಲೀಸ್ ಅಧಿಕಾರಿಗಳ ಅನುಮತಿ ಪಡೆದು ಪ್ರತಿಜ್ಞಾವಿಧಿ ಬೋಧಿಸಿ ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ. ಸಂತೋಷ್, ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಮಂಜುನಾಥ್ ಜಿ. ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮಲ್ಲೇಶ್ ದೊಡ್ಡನಿ, ಡಿ.ಎ.ಆರ್. ಪೊಲೀಸ್ ಉಪಾಧೀಕ್ಷಕರಾದ ಪ್ರಕಾಶ ಪಿ.ಬಿ., ಡಿ.ಎ.ಆರ್. ಪೊಲೀಸ್ ನಿರೀಕ್ಷಕರಾದ ಸೋಮೇ ಶ್ವರ ಹೆಚ್.ಬಿ., ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಆಸಿನರಾಗಿದ್ದರು.

ಶಾಲಾ ಮಕ್ಕಳಿಂದ ಪ್ರಾರ್ಥನೆ ಯೊಂದಿಗೆ ಪ್ರಾರಂಭವಾದ ಸಮಾರಂಭಕ್ಕೆ ಪೊಲೀಸ್ ಉಪಾಧೀಕ್ಷಕರಾದ ಪ್ರಕಾಶ ಪಿ.ಬಿ. ಸ್ವಾಗತಿಸಿದರು. ಪೊಲೀಸ್ ಹೆಡ್ ಕಾನ್ಸ್‌ ಸ್ಟೇಬಲ್ ಅಂಬರೀಶ್ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರೂಪಿಸಿದರು. ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀಮತಿ ವಸಂತಿ ಮಂಜುನಾಥ್, ಸಮಿತಿ ಸದಸ್ಯರಾದ ಶ್ರೀಮತಿ ಜಯಶ್ರೀ ದಂಪತಿಗಳು ಉಪಸ್ಥಿತರಿದ್ದರೆ ಶೈಕ್ಷಣಿಕ ಕಾಳಜಿಯ 35 ವರ್ಷಗಳ ಸಾಧನೆಗಳನ್ನು ಸ್ಮರಿಸಿ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಮತ್ತು ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ರವರಿಗೆ ಪೊಲೀಸ್ ಇಲಾಖೆಯಿಂದ ಗೌರವಿಸಿ ಸನ್ಮಾನಿಸಿದರು. ಕೊನೆಯಲ್ಲಿ ಕಲಾಕುಂಚ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಂದಿಸಿದರು.

RELATED ARTICLES
- Advertisment -
Google search engine

Most Popular