ಪತ್ನಿ ಜೊತೆ ಅಕ್ರಮ ಸಂಬಂಧ: ಪ್ರಾಣ ಸ್ನೇಹಿತನ ಪ್ರಾಣವನ್ನೇ ತೆಗೆದ ಗೆಳೆಯ

0
123

ಕಲಬುರಗಿ: ತನ್ನ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಪ್ರಾಣವನ್ನೇ  ಗೆಳೆಯ ತೆಗೆದಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿಯಲ್ಲಿ ನಡೆದಿದೆ. ವೈರ್​ನಿಂದ ಕತ್ತಿಗೆ ಬಿಗಿದು ಅಂಬರೀಶ್(28) ನನ್ನ ಅಜಯ್ ಹತ್ಯೆಗೈದಿದ್ದಾನೆ.​ ಕೊಲೆ ಮಾಡಿದ ಅಜಯ್ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸದ್ಯ ಘಟನೆ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ದಾಖಲಾಗಿದೆ.

ನಡೆದದ್ದೇನು?

ಅಂಬರೀಶ್ ಹಾಗೂ ಅಜಯ್ ಇಬ್ಬರು ಕುಚಿಕು ಗೆಳೆಯರು. ಆದರೆ ಅಜಯ್ ಪತ್ನಿ ಜೊತೆ ಅಂಬರೀಶ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ಕೆಲ ದಿನಗಳ ಹಿಂದೆ ಅಜಯ್​ ಪತ್ನಿ ಮನೆ ತೊರೆದಿದ್ದಳು. ನನ್ನ ಪತ್ನಿ ನಿನ್ನ ಮಾತು ಕೇಳುತ್ತಾಳೆ. ನನ್ನ ಜೊತೆ ಇರುವುದಕ್ಕೆ ಹೇಳುವಂತೆ ಬಾ ಎಂದು ಅಂಬರೀಶ್ ನನ್ನ ಅಜಯ್​ ಬೆಂಗಳೂರಿನಿಂದ ಮುರಡಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ತನ್ನ ಮನೆಯಲ್ಲಿ ವೈರ್​ನಿಂದ ಕತ್ತಿಗೆ ಬಿಗಿದು ಅಂಬರೀಶ್​ನನ್ನ ಅಜಯ್ ಹತ್ಯೆ ಮಾಡಿದ್ದಾನೆ. ಸ್ನೇಹಿತ ನನ್ನು ಕೊಲೆ ಮಾಡುವುದಷ್ಟೆ ಅಲ್ಲದೆ ಅಜಯ್​ ಸ್ವತಃ ಪೊಲೀಸರಿಗೆ ಕರೆ ಮಾಡಿ ಮಾಹಿತಿ‌ ನೀಡಿದ್ದಾನೆ. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

LEAVE A REPLY

Please enter your comment!
Please enter your name here