ಮೂತ್ರಪಿಂಡ ಶಸ್ತç ಚಿಕಿತ್ಸಕ ತಜ್ಞರ ಸಂಘ ಮಂಗಳೂರು ಶಾಖೆಯ ನೂತನ ಪದಧಿಕಾರಿಗಳ ಪದಗ್ರಹಣ ಸಮಾರಂಭ ತಾ.೨೧.೧೧.೨೦೨೪ ರಂದು ನಗರದ ಕೆನರಾ ಕ್ಲಬ್ ಸಭಾಂಗಣದಲ್ಲಿ. ನಿರ್ಗಮನ ಅಧ್ಯಕ್ಷ ಡಾ.ಪ್ರಿತಮ್ ಶರ್ಮ ಅಧ್ಯಕ್ಷತೆಯಲ್ಲಿ ಜರುಗಿತು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಮ್ಮ ಆಧಿಕಾರ ಅವಧಿಯಲ್ಲಿ ಸಹಕರಿಸಿದ ಸರ್ವ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ಸಾಂಕೇತಿಕವಾಗಿ ತಮ್ಮ ಅಧಿಕಾರವನ್ನು ಹಸ್ತಾಂತರಿಸಿದರು.
ನೂತನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಡಾ. ನಂದಕಿಶೋರ್. ಬಿ ರವರು ಸದಸ್ಯರು ತಮ್ಮ ಮೇಲೆ ವಿಶ್ವಾಸವನ್ನು ಇಟ್ಟು ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿ ಇದೊಂದು ಜವಾಬ್ದಾರಿಯುತವಾದ ಹುದ್ದೆ ಮತ್ತು ಸವಾಲುಗಳನ್ನು ಒಳಗೊಂಡ ಹುದ್ದೆಯಾಗಿದ್ದು ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಆಶ್ವಾಸನೆ ನೀಡಿ, ಪ್ರಸ್ತುತ ಸಾಲಿನಲ್ಲಿ ಸದಸ್ಯರ ಅನುಕೂಲಕ್ಕಾಗಿ ಹಲವಾರು ವಿವಿದ ವೈದ್ಯಕೀಯ ಶಿಕ್ಷಣ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು ಅದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸರ್ವಸದಸ್ಯರ ಉತ್ಸಾಹ ಮತ್ತು ಪ್ರೋತ್ಸಾಹವನ್ನು ಕೋರಿದರು.
ನಿರ್ಗಮನ ಕಾರ್ಯದರ್ಶಿ ಡಾ. ಸನ್ಮಾನ್ ವಾರ್ಷಿಕ ವರದಿ ಮಂಡಿಸಿದರು. ನಿರ್ಗಮಿಸುವ ಕೋಶಾಧಿಕಾರಿ ಡಾ. ಪ್ರಶಾಂತ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.
ವೇದಿಕೆಯಲ್ಲಿ ನೂತನ ಕೋಶಾಧಿಕಾರಿಯಾದ ಡಾ. ರೋಶನ್ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಾ. ಶರತ್, ಡಾ. ಕಿಶನ್ ರಾಜ್ ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ಡಾ. ಸುಯೋಗ್ ಶೆಟ್ಟಿ ವಂದಿಸಿದರು.