ಮದ್ಯವ್ಯಸನ ವಿಮುಕ್ತಿ ಶಿಬಿರ ಉದ್ಘಾಟನೆ

0
46


ಉಡುಪಿ: ಜೀವನದಲ್ಲಿ ಮನುಷ್ಯ ತಪ್ಪು ಮಾಡುವುದು ಸಹಜ. ಅದನ್ನು ತಿದ್ದಿಕೊಳ್ಳುವ ಅವಕಾಶವೂ ನಮ್ಮ ಪಾಲಿಗಿದೆ. ಈ ನಿಟ್ಟಿನಲ್ಲಿ ಮದ್ಯವರ್ಜನ ಶಿಬಿರಗಳ ಮೂಲಕ ಬಾಳಿನಲ್ಲಿ ಹೊಸ ಬೆಳಕು ಕಾಣಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಪ್ರಾಧಿಕಾರ ಸದಸ್ಯ ವಿಶು ಶೆಟ್ಟಿ ಹೇಳಿದರು.

ದೊಡ್ಡಣಗುಡ್ಡೆ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಕಮಲ್​ ಎ. ಬಾಳಿಗಾ ಚಾರಿಟೇಬಲ್​ ಟ್ರಸ್ಟ್​ ಮತ್ತು ಭಾರತೀಯ ವೈದ್ಯಕಿಯ ಸಂಘ ಆಶ್ರಯದಲ್ಲಿ ನಡೆದ 35ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಮನೋವೈದ್ಯ ಡಾ. ಪ್ರಕಾಶ್​ ಸಿ. ತೋಳಾರ್​ ಮಾತನಾಡಿ, ಮದ್ಯವ್ಯಸನವೆಂಬುದು ಮನೋರೋಗ. ಇದನ್ನು ಹೋಗಲಾಡಿಸಲು ಜೀವನದ ಮಹತ್ವವನ್ನು ಅರಿತು ಕೊಳ್ಳಬೇಕು ಎಂದು ಹೇಳಿದರು.
ಭಾರತೀಯ ವೈದ್ಯಕಿಯ ಸಂಘದ ಅಧ್ಯಕ್ಷ ಡಾ. ಅಶೋಕ್​ ಕುಮಾರ್​ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್​ ಅತಿಥಿಗಳಾಗಿದ್ದರು.
ಡಾ. ವಿ. ವಿ. ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ. ಪಿ. ವಿ. ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ, ಡಾ. ದೀಪಕ್​ ಮಲ್ಯ ಮತ್ತು ಡಾ. ಮಾನಸ್​ ಇ.ಆರ್​. ಉಪಸ್ಥಿತರಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು 5 ವರ್ಷಕ್ಕಿಂತ ಹೆಚ್ಚಿನ ಸಮಯ ಮದ್ಯ ಮುಕ್ತ ಜೀವನ ನಡೆಸಿದ 6 ಮಂದಿಯನ್ನು ಸನ್ಮಾನಿಸಲಾಯಿತು. ಆಪ್ತಸಮಾಲೋಚಕಿ ಪದ್ಮಾ ರಾಘವೇಂದ್ರ ಪ್ರಾರ್ಥಿಸಿದರು. ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಮನಶಾಸ್ತ್ರ್ರಜ್ಞ ನಾಗರಾಜ್​ ಮೂರ್ತಿ ವಂದಿಸಿದರು. ಆಪ್ತಸಮಾಲೋಚಕಿ ದೀಪಶ್ರೀ ನಿರೂಪಿಸಿದರು.

LEAVE A REPLY

Please enter your comment!
Please enter your name here