ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ಸಾಹಿತ್ಯ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ರಿಬ್ಬನ್ ಕತ್ತರಿಸುವುದರ ಮೂಲಕ ಕಾರ್ಕಳದ ಖ್ಯಾತ ನ್ಯಾಯವಾದಿ ರೇಖಾ ಹೆಗ್ಡೆಯವರು ಉದ್ಘಾಟಿಸಿದರು. ಅವರು ಮಾತನಾಡುತ್ತಾ, ನಮ್ಮ ದೇಶದ ಸಂಸತ್ತು ಮತ್ತು ಶಾಲಾ ಸಂಸತ್ತು ಬೇರೆ ಬೇರೆಯಾದರೂ ಜವಾಬ್ದಾರಿಗಳು ಒಂದೇ ತರಹ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ ಮತ್ತು ಶಾಲಾ ಚಟುವಟಿಕೆಗಳ ಬಗ್ಗೆ ಗಮನ ಕೊಡಿ ಎಂದು ಹೇಳಿದರು.
ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿಯವರು ಮಾತನಾಡುತ್ತಾ, ನಮ್ಮ ಜೀವನದಲ್ಲಿ ಉತ್ತಮ ಅವಕಾಶಗಳು ಸಿಕ್ಕಿದಾಗ ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಚಟುವಟಿಕೆ ಮತ್ತು ಕಲಿಯುವಿಕೆಯನ್ನು ಹೊಂದಾಣಿಕೆ ಮಾಡಿಕೊಂಡು ಹೋಗಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿಯವರು, ನ್ಯಾಯವಾದಿ ರೇಖಾ ಹೆಗ್ಡೆಯವರು, ಶಾಲಾ ನಾಯಕಿ ನಿರೀಕ್ಷಾ ಭಟ್, ಉಪನಾಯಕ ಅಲೋಕ್ಸಿ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯನಿ ಸುರೇಖಾ ರಾಜ್ ರವರು ಉಪಸ್ಥಿತರಿದ್ದರು.