ಕಿನ್ನಿಗೋಳಿ : ಶೈಕ್ಷಣಿಕ ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಬೆಳೆಯಲು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕಟೀಲು ದೇಗುಲದ ಅರ್ಚಕ ವೆಂಕಟರಮಣ ಆಸ್ರಣ್ಣ ಹೇಳಿದರು.
ಅವರು ಶುಕ್ರವಾರ ಕಟೀಲು ಶ್ರೀ ದುರ್ಗಾಪರಮೇಶ್ಬರೀ ದೇವಳ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿವಿಧ ಪಠ್ಯಪೂರಕ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು.
ಅದಮಾರು ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ಉಪನ್ಯಾಸಕ ದೇವಿಪ್ರಸಾದ್ ಬೆಳ್ಳಿಬೆಟ್ಟು ವಿದ್ಯಾರ್ಥಿಗಳಿಗೆ ಸಂಘಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲರಾಗಬೇಕೆಂದರು. ನಿವೃತ್ತ ಉಪ ಪ್ರಾಚಾರ್ಯ ಸುರೇಶ್ ಭಟ್, ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಮುಖ್ಯಸ್ಥ ಗಿರೀಶ್ ತಂತ್ರಿ, ಕನ್ನಡ ಮಾಧ್ಯಮ ಪ್ರೌಢಶಾಲೆ ಉಪ ಪ್ರಾಚಾರ್ಯ ರಾಜಶೇಖರ ಎನ್ ವೇದಿಕೆಯಲ್ಲಿದ್ದರು.
ಶಿಕ್ಷಕಿಯರಾದ ಸುಷ್ಮಾ ಹಾಗೂ ಶೀಲಾ ಸಂಘಗಳ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ಸಂಸ್ಥೆಯ ಹಿರಿಯ ಅಧ್ಯಾಪಕಿ ರೋಹಿಣಿ ಶೆಟ್ಟಿ ನಿರೂಪಿಸಿದರು.