Monday, May 12, 2025
Homeಮೂಡುಬಿದಿರೆಅಶ್ವತ್ಥಪುರ ಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೌಲಭ್ಯಗಳ ಬಗ್ಗೆ ಮಾಹಿತಿ 

ಅಶ್ವತ್ಥಪುರ ಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೌಲಭ್ಯಗಳ ಬಗ್ಗೆ ಮಾಹಿತಿ 

ಮೂಡುಬಿದರೆ ತಾಲೂಕಿನ ಅಶ್ವತಪುರ ಗ್ರಾಮದ ಶ್ರೀ ವಾಣಿವಿಲಾಸ ವಿದ್ಯಾಸಂಸ್ಥೆಯಲ್ಲಿ ನವೆಂಬರ್ 20ರಂದು ವಿದ್ಯಾರ್ಥಿಗಳಿಗೆ ಗ್ರಾಮೀಣ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಯವರು ಮಾಹಿತಿಯನ್ನು ನೀಡಿದರು. ಒಂದನೇ ತರಗತಿಯಿಂದ ಪಿಯುಸಿ ತನಕ ಗ್ರಾಮೀಣ ಪ್ರದೇಶದಲ್ಲಿಯೇ ಕಲಿಯುವುದರಿಂದ ಸರಕಾರ ನೀಡುತ್ತಿರುವ ಗ್ರಾಮೀಣ ಕೃಪಾಂಕ ಪಡೆಯಲು ಸಾಧ್ಯವಿದೆ ಎಂದು ಹಲವಾರು ಉದಾಹರಣೆಗಳ ಮೂಲಕ ತಿಳಿಸಿಕೊಟ್ಟರು. 

ಈ ಸಂದರ್ಭದಲ್ಲಿ ಅಧ್ಯಾಪಕ ವರ್ಗ ಹಾಗೂ ವಿದ್ಯಾರ್ಥಿ ವೃಂದ ಹಾಜರಿದ್ದು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

RELATED ARTICLES
- Advertisment -
Google search engine

Most Popular