ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ವಿಭಾಗದ ವತಿಯಂದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ “Basics to Brilliance”” ಶೀರ್ಷಿಕೆಯಡಿ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಾಗಾರದಲ್ಲಿ ಹತ್ತನೇ ತರಗತಿ ಮುಗಿಸಿ ಬಂದAತಹ ವಿದ್ಯಾರ್ಥಿಗಳು ಪಿಯುಸಿ ಹಂತದಲ್ಲಿ ಎದುರಿಸಬೇಕಾದ ಪರೀಕ್ಷೆಗಳು, ಅದಕ್ಕೆ ಪೂರ್ವಭಾವಿ ತಯಾರಿ, ಪರೀಕ್ಷೆಯ ಸ್ವರೂಪ, ಪ್ರಶ್ನೆ ಪತ್ರಿಕೆಯ ಮಾದರಿ ಹಾಗೂ ಅದರ ತಯಾರಿಯ ಕುರಿತ ಮಾಹಿತಿಯನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ದೇವಿಪ್ರಸಾದ್ ಹಾಗೂ ಶ್ರೀಧರ್ ಶೆಟ್ಟಿಗಾರ್ ವಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ವಾಣಿಜ್ಯ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.

