Wednesday, January 15, 2025
Homeದಾವಣಗೆರೆಶ್ರೀ ಸ.ದಾ ಶೆಣೈ ಪ್ರತಿಷ್ಠಾನದಿಂದ “ಸರಸ್ವತಿ ಸಾಧಕ ಸಿರಿ” ರಾಷ್ಟ್ರ ಪ್ರಶಸ್ತಿಗೆ ಆಹ್ವಾನ

ಶ್ರೀ ಸ.ದಾ ಶೆಣೈ ಪ್ರತಿಷ್ಠಾನದಿಂದ “ಸರಸ್ವತಿ ಸಾಧಕ ಸಿರಿ” ರಾಷ್ಟ್ರ ಪ್ರಶಸ್ತಿಗೆ ಆಹ್ವಾನ


ದಾವಣಗೆರೆ: ಸಾಲಿಗ್ರಾಮದ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದಿಂದ 70ನೇ ವರ್ಷದ ಕನ್ನಡ ನಿತ್ಯೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳ ಹಿರಿಯ, ಕಿರಿಯ ಸಾಧಕರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟç ಪ್ರಶಸ್ತಿ ವಿತರಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಾಧಕರ ಭಾವಚಿತ್ರವಿರುವ ಸನ್ಮಾನಪತ್ರ, ಸಂಸ್ಥೆಯ ಮುತ್ತೆöÊದೆಯರು ಪ್ರಶಸ್ತಿ ಪುರಸ್ಕೃತರಿಗೆ ಸಿಂಹಾಸನದ ಮೇಲೆ ಕೂರಿಸಿ, ಕನ್ನಡ ತಿಲಕವಿಟ್ಟು, ಕನ್ನಡ ಕಂಕಣಕಟ್ಟಿ, ಕನ್ನಡಾರತಿ ಬೆಳಗಿ, ದಿವ್ಯ, ಭವ್ಯ ವೇದಿಕೆಯಲ್ಲಿ ಪ್ರತ್ಯೇಕವಾಗಿ ಕೂರಿಸಿ, ಕನ್ನಡಪ ಪೇಟೆ, ಹಾರ, ಶಾಲು, ಚಿನ್ನದ ಲೇಪನದ ಪದಕ ಹಾಕಿ ಪುಷ್ಪವೃಷ್ಟಿಯೊಂದಿಗೆ ಸನ್ಮಾನಿಸಿ, ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ನಾಗೇಶ ಸಂಜೀವ ಕಿಣಿ ಪ್ರಕಟಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9538732777 ಈ ಸನೀಹವಾಣಿಗೆ ಸಂಪರ್ಕಿಸಬಹುದು ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಾಘವೆಂದ್ರ ಶೆಣೈ ವಿನಂತಿಸಿದ್ದಾರೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-12-2024

RELATED ARTICLES
- Advertisment -
Google search engine

Most Popular