Thursday, April 24, 2025
HomeUncategorizedಚುಟುಕು ಕವನ ವಾಚನಕ್ಕೆ ಆಹ್ವಾನ

ಚುಟುಕು ಕವನ ವಾಚನಕ್ಕೆ ಆಹ್ವಾನ

ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸಹಕಾರದಲ್ಲಿ, ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬೇಕಲ ರಾಮ ನಾಯಕ ಅವರ ಬದುಕು – ಬರಹ ದ ಕುರಿತ ಸ್ಮರಣಾಂಜಲಿ ಕಾರ್ಯಕ್ರಮವು ಏ.27ರಂದು ಅಪರಾಹ್ನ 2ರಿಂದ ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ವಸಂತ ಚುಟುಕು ಕವಿಗೋಷ್ಠಿ ಯಲ್ಲಿ ಕಾಸರಗೋಡು ಜಿಲ್ಲೆಯ ಆಸಕ್ತ ಕವಿಗಳಿಗೆ ಚುಟುಕುಗಳನ್ನು ವಾಚಿಸಲು ಅವಕಾಶವಿದೆ. ಚುಟುಕಕ್ಕೆ ವಿಷಯ ನಿರ್ಬಂಧ ಇಲ್ಲ. ಒಬ್ಬರು 4 ಸಾಲಿನ ಉತ್ತಮ ಎನಿಸುವ ಮೂರು ಚುಟುಕವನ್ನು ವಾಚಿಸಬಹುದು. ಆಸಕ್ತರು ಏ. 20ರ ಮೊದಲು 9447490344 ಸಂಖ್ಯೆಗೆ ವಾಟ್ಸಪ್ ಮೂಲಕ ತಮ್ಮ ಭಾಗವಹಿಸುವಿಕೆಯನ್ನು ತಿಳಿಸಬೇಕೆಂದು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular