ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ವಾಮನ್ ರಾವ್ ಬೇಕಲ್- ಸಂಧ್ಯಾರಾಣಿ ಟೀಚರ್ ಸಾರಥ್ಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕೋಲಾರ -ಕಾಸರಗೋಡು ಗಡಿ, ಕರ್ನಾಟಕ ರಾಜ್ಯೋತ್ಸವ ಸಂಭ್ರಮ-2025 ಕಾರ್ಯಕ್ರಮವು ಇದೇ ನವಂಬರ್ 15ರಂದು ಅಪರಾಹ್ನ 1 ಗಂಟೆಯಿಂದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕದ ಸಹಕಾರದಲ್ಲಿ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿದೆ.
ಕವಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಆಸಕ್ತರು ತಮ್ಮ ಹೆಸರನ್ನು 9447490344 ಸಂಖ್ಯೆಗೆ ವಾಟ್ಸಪ್ ಮೂಲಕ ನ. 10ರ ಮೊದಲು ತಿಳಿಸಬೇಕು. ಭಾಗವಹಿಸುವ ಕವಿಗಳು 3 ಸ್ವರಚಿತ ಚುಟುಕುಗಳನ್ನು ವಾಚಿಸಬೇಕು. ಈ ಗೋಷ್ಠಿಯಲ್ಲಿ 15 ಮಂದಿ ಕವಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

