ವರದಿ ರಾಯಿ ರಾಜ ಕುಮಾರ
ದ.ಕ.ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಲಾಗುತ್ತಿರುವ ಮನೆ ತೆರವಿಗೆ ಹೈಕೋರ್ಟ್ ಆದೇಶ ನೀಡಿದ್ದು, ತೆರವುಗೊಳಿಸದೆ ಕಾಮಗಾರಿ ಮುಂದುವರಿಸಲು ಪಿಡಿಒ ಅವಕಾಶ ನೀಡಿರುತ್ತಾರೆ.
ಇರುವೈಲಿನ ಕೊಲಾಯಿಕೋಡಿ ಎಂಬಲ್ಲಿ ರವಿಂದ್ರ ಶೆಟ್ಟಿ ಅವರು ಸರ್ವೆ ನಂಬ್ರ 99/1ರ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಯಶೋಧ, ಯಮುನಾ ಶೆಟ್ಟಿ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ತಹಶೀಲ್ದಾರರಿಗೆ ದೂರು ನೀಡಿದ್ದರು. ಒಂದು ವರ್ಷದಿಂದಲೂ ಈ ಅನಧಿಕೃತ ನಿರ್ಮಾಣದ ತೆರವಿಗೆ ಪಿಡಿಒ ಮತ್ತು ತಹಶೀಲ್ದಾರರು ಏನೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ದೂರುದಾರರು ಹೈಕೋರ್ಟ್ನಲ್ಲಿ ರಿಟ್ ಪಿಟಿಷನ್ (ನಂಬ್ರ: 36526/2025) ಸಲ್ಲಿಸಿದ್ದರು.
ದೂರು ನೀಡಿದ್ದರೂ ಕ್ರಮಕೈಗೊಳ್ಳದ ಅಧಿಕಾರಿಗಳ ನಡೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಆರ್. ನಟರಾಜ್ ಅವರು ಅನಧಿಕೃತ ನಿರ್ಮಾಣಕ್ಕೆ ಡಿಸೆಂಬರ್ 4ರಂದು ತಡೆಯಾಜ್ಞೆ ನೀಡಿದ್ದಾರೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪರಿಶೀಲನೆ ನಡೆಸಿ ಅನಧಿಕೃತ ಕಾಮಗಾರಿಯನ್ನು ಪೊಲೀಸರ ನೆರವಿನಿಂದ ತಕ್ಷಣ ನಿಲ್ಲಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.
ರವೀಂದ್ರ ಶೆಟ್ಟಿ ಅವರು ಈ ಹಿಂದೆ ಸದ್ರಿ ಪ್ರದೇಶದ ಬಳಿಯಲ್ಲಿ ಕರ್ಯನಿರ್ವಹಿಸುತ್ತಿದ್ದ ಕೋರೆಯೊಂದರ ಕಾರ್ಮಿಕರ ಶೆಡ್ಡಿನ ವಿದ್ಯುತ್ ಸಂಪರ್ಕವನ್ನು ಈ ಅನಧಿಕೃತ ಮನೆಗೆ ವರ್ಗಾಯಿಸಿದ ಆರೋಪವನ್ನೂ ಎದುರಿಸುತ್ತಿದ್ದಾರೆ. ಹೈಕೋರ್ಟ್ ತಡೆಯಾಜ್ಞೆ ನೀಡಿದ ಮೇಲೆಯೂ ತುರಾತುರಿಯಿಂದ ಕಾಮಗಾರಿ ಪೂರ್ಣಗೊಳಿಸಿ ಮನೆಯಲ್ಲಿ ವಾಸಿಸಲು ಪ್ರಯತ್ನಿಸುತ್ತಿದ್ದು ನ್ಯಾಯಾಂಗ ನಿಂದನೆಯಾಗಿದೆ.
ಲೋಕಾಯುಕ್ತ, ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಿದ್ದು, ಇದೀಗ ಇರುವೈಲಿಗೆ ಹೊಸದಾಗಿ ಬಂದಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರು ನೋಟೀಸು ನೀಡಿದ್ದರೂ, ಪ್ರತಿವಾದಿ ರವೀಂದ್ರ ಶೆಟ್ಟಿ ಅವರು ತುರಾತುರಿಯಿಂದ ಕಾಮಗಾರಿ ಮುಂದುವರಿಸಲು ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ದೂರುದಾರರು ಲೋಕಾಯುಕ್ತ ಮತ್ತು ದ.ಕ. ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸಿದ್ದಾರೆ. ಕಾಮಗಾರಿ ಮುಂದುವರಿಯುತ್ತಿರುವ ಬಗ್ಗೆ ಹೈಕೋರ್ಟಿಗೆ ಕೂಡಾ ಮಾಹಿತಿ ನೀಡಲಾಗಿದೆ. ಇದರಿಂದ ಇರುವೈಲು ಪಿಡಿಒ ಅವರಿಗೆ ತಲೆದಂಡವಾಗುವ ಸಾಧ್ಯತೆಯಿದೆ.
ಹೈಕೋರ್ಟ್ ತಡೆಯಾಜ್ಞೆಯನ್ನೂ ಧಿಕ್ಕರಿಸಿ ರವೀಂದ್ರ ಶೆಟ್ಟಿ ಎಂಬವರು ಮನೆಯ ಕಾಮಗಾರಿ ಮಾಡುತ್ತಿರುವುದು


