ಬಿಕರ್ನಕಟ್ಟೆಯಲ್ಲಿ ವೋಟ್‌ ಚೋರ್‌ ಗದ್ದಿ-ಚೋಡ್‌ ಸಹಿ ಸಂಗ್ರಹ ಅಭಿಯಾನಐವನ್‌ ಡಿʼಸೋಜಾ

0
12

ವೋಟ್‌ ಚೋರ್‌ ಗದ್ದಿ-ಚೋಡ್‌ ಈ ಅಭಿಯಾನ ಇಂದು ಬಿಕರ್ನಕಟ್ಟೆಯಲ್ಲಿ  ನಡೆಸಲಾಯಿತು ಈ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಐವನ್‌ ಡಿʼಸೋಜಾ ಇವರು ಬಿಜೆಪಿ ಸರಕಾರ ಇಂದು ಅಧಿಕಾರಕ್ಕೆ ಬಂದು ಸುಳ್ಳು ಆಶ್ವಾಸನೆ ನೀಡಿ ಜನರ ಮನಸಿನಲ್ಲಿ ವಿಫಲವಾಗಿದ್ದು ಯಾವುದೇ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೇ ಜನರು ಅದನ್ನು ತೀವ್ರವಾಗಿ ತಿರಸ್ಕರಿಸುವ ಈ ಸಂದರ್ಭದಲ್ಲಿ ಕಡೆಯದಾಗಿ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸವನ್ನು ಮಾಡಲು ಪ್ರಾರಂಭಿಸಿದೆ ಇದು ಮಹಾರಾಷ್ಟ ಹಾಗೂ ಬೇರೆ ರಾಜ್ಯಗಳಲ್ಲಿ ಮತಕಳ್ಳತನದ ಮೂಲಕ ಅಧಿಕಾಕ್ಕೆ ಬಂದಂತಹ ಬಿಜೆ.ಪಿ. ಇಂದು ಮತ್ತೆ ಬೇರೆ ಬೇರೆ ರಾಜ್ಯಗಳಲ್ಲಿ ಕೈಯಾಡಿಸುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸಹಿಸುವುದಿಲ್ಲ ಎಂದು ಬಿಕರ್ನಕಟ್ಟೆಯಲ್ಲಿ  ನಡೆದ ವೋಟ್‌ ಚೋರ್‌ ಗದ್ದಿ-ಚೋಡ್‌ ಈ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್‌ ಸರಕಾರ ಪಂಚಗ್ಯಾರಂಟಿ ಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರ ಅರ್ಥಿಕ ಪರಿಸ್ಥಿತಿಯನ್ನು ಉನ್ನತ ಮಟ್ಟಕ್ಕೆ ಏರಿಸುವ ಕೆಲಸವನ್ನು ಮಾಡಿದೆ. ಅರ್ಥಿಕ ಸಭಲತೆಯನ್ನು ನೀಡಿದೆ.ಅದೇ ರೀತಿ Per capita Income (ತಲಾ ಆದಾಯ) ದಲ್ಲಿ ದೇಶದಲ್ಲಿಯೇ ಕರ್ನಾಟಕ ಸರಕಾರ ಪ್ರಥಮ ಸ್ಥಾನದಲ್ಲಿದೆ. ಹಾಗಾಗಿ ಜನರನ್ನು ಸುಲಭವಾಗಿ ಮೋಸ ಮಾಡಲು ಸಾಧ್ಯವಿಲ್ಲ ಮತವನ್ನು ಕಳ್ಳತನ ಮಾಡುವ ಮೂಲಕ ತಂತ್ರಗಾರಿಕೆಯನ್ನು ಮಾಡುತ್ತಿದೆ ಅದುದರಿಂದ ಕಾಂಗ್ರೆಸ್‌ ಸರಕಾರ ಮತಕಳ್ಳತನಕ್ಕೆ ಅಸ್ಪದ ನೀಡುವುದಿಲ್ಲ ಎಂದು ಐವನ್‌ ಡಿʼಸೋಜಾ ತಿಳಿಸಿದರು. ನಿನ್ನೆ ಹಾಗೂ ಇಂದು ಅಭಿಯಾನದ ಭಾಗವಾಗಿ ಬಿಕರ್ನಕಟ್ಟೆಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅದೇ ರೀತಿ ಬೇರೆ ದಿನಗಳಲ್ಲಿ ಸಂಜೆಯ ಹೊತ್ತಿನಲ್ಲಿ ಜನಸಂದಣಿ ಇರುವ ಪ್ರದೇಶದಲ್ಲಿ ಸಹಿ ಅಭಿಯಾನದ ಜೊತೆಗೆ ಬಿಜೆಪಿಯ ವಿರುದ್ದ ಜನಾಂದೋಲನವನ್ನು  ಮಾಡುವುದಾಗಿ ಐವನ್‌ ಡಿʼಸೋಜಾ ತಿಳಿಸಿದರು.

ಈ ಸಮಾರಂಭದ ಅಧ್ಯಕ್ಷತೆಯನ್ನು ಪ್ರಕಾಶ್‌ ಸಾಲ್ಯಾನ್‌ ರವರು ವಹಿಸಿದ್ದರು. ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕರಾದ ಜೆ.ಆರ್.ಲೋಬೋರವರು ಮತಗಳ್ಲತನಕ್ಕೆ ಯಾರೂ ಬೆಂಬಲ ಕೊಡಬಾರದು ಮತದಾರರು ಜಾಗೃತರಾಗಬೇಕಾದ ಅನಿವಾರ್ಯತೆ ಇದೆ  ಮತದಾರ ಹಕ್ಕನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು. ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ ಮಾತನಾಡಿ ಮತದಾನದ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶ್ಲಾಘಿಸಿದರು. ಸಮಾರಂಭದಲ್ಲಿ ನವೀನ್‌ ಡಿʼಸೋಜಾ ಮೀನಾ ಟೆಲ್ಲಿಸ್‌ ಸತೀ಼ಷ್‌ ಪೆಂಗಲ್‌, ಪ್ರೇಮ್‌ ಬಲ್ಲಾಳ್‌ಬಾಗ್‌, ಟಿ.ಕೆ.ಸುಧೀರ್‌, ಆಲ್ಟೇನ್‌ ಡಿʼಕುನ್ಹ, ರಿತೇಶ್‌ ಶಕ್ತಿನಗರ, ಜೇಮ್ಸ್‌ ಪ್ರವೀಣ್‌,  ಮಂಜುಳಾ ನಾಯಕ್‌, ಕ್ರಿಸ್ಟನ್‌, ಆಶಾಲತಾ, ಟಿಸಿ ಗಣೇಶ್‌, ಸುನೀತ್‌, ಪ್ರಧ್ವಿ, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here