Friday, May 23, 2025
Homeಮಂಗಳೂರುಜು.20: ತುಳು ಅಕಾಡೆಮಿಯ 30ನೇ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಅಮೃತ ಸೋಮೇಶ್ವರ ಸಭಾಂಗಣ ಲೋಕಾರ್ಪಣೆ

ಜು.20: ತುಳು ಅಕಾಡೆಮಿಯ 30ನೇ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಅಮೃತ ಸೋಮೇಶ್ವರ ಸಭಾಂಗಣ ಲೋಕಾರ್ಪಣೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 30ನೇ ವರ್ಷಾಚರಣೆಯ ಉದ್ಘಾಟನಾ ಕಾರ್ಯಕ್ರಮ ಹಾಗೂ ನೂತನ ಅಮೃತ ಸೋಮೇಶ್ವರ ಸಭಾಂಗಣ ಲೋಕಾರ್ಪಣೆಯು ಜು.20 ರ ಶನಿವಾರ ಮಧ್ಯಾಹ್ನ 2.30 ಕ್ಕೆ ಮಂಗಳೂರು ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸ್ಥಾಪಕರಾದ ಎಂ.ವೀರಪ್ಪ ಮೊಯಿಲಿ
ಅವರು ಅಕಾಡೆಮಿಯ 30ನೇ ವರ್ಷಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ನೂತನ ಅಮೃತ ಸೋಮೇಶ್ವರ ಸಭಾಂಗಣವನ್ನು ಲೋಕಾರ್ಪಣೆ ಮಾಡುವರು. ಸಂಸದ ಬ್ರಿಜೇಶ್ ಚೌಟ , ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು , ಮಾಜಿ ಸಚಿವರು , ವಿವಿಧ ಅಕಾಡೆಮಿಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular