ಮೂಡುಬಿದಿರೆ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಕಡಂದಲೆ ಇಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. K.M.F ನ ಮಾಜಿ ಅಧ್ಯಕ್ಷರಾಗಿರುವ ಕೆ.ಪಿ ಸುಚರಿತ ಶೆಟ್ಟಿ, ನಿವೃತ್ತ ಶಿಕ್ಷಕರಾಗಿರುವ T.N ಕೆಂಬಾರೆ, ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ, ಹಾಗೂ ಆತ್ಮೀಯರಾದ ಜೋಗಪ್ಪ ಪೂಜಾರಿ, ಪತ್ರಕರ್ತ ಜಗದೀಶ್ ಪೂಜಾರಿ, ವಲಯ ಮೇಲ್ವಿಚಾರಕ ಅರುಣ್ ಕುಮಾರ್, ಅಡುಗೆ ಸಿಬ್ಬಂದಿಯವರು, ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

