ಮಂಗಳೂರು: ಮುಂಡಾಲ ಸಮಾಜ ಗುರುಪುರ, ಕೈಕಂಬ, ಕಂದಾವರ, ಮಂಗಳೂರು ಇದರ ಆಶ್ರಯದಲ್ಲಿ ಆಟ-ಊಟ-ಕೂಟವು ಆ. 3ರಂದು ಕಂದಾವರದ ಡಾ. ಬಿ.ಆರ್. ಅಂಬೇಡ್ಕರ್ ಸಮಾಜ ಮಂದಿರದ ವಠಾರದಲ್ಲಿ ನಡೆಯಲಿದೆ.
ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟಗಳು, ಆಟಿದ ಊಟೋಪಚಾರ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರ ಪ್ರಕಟಣೆ ತಿಳಿಸಿದೆ.

