ಕಾರ್ಕಳ: ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇಲ್ಲಿ ಸೆ.೨ರಂದು ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕಾಂತಾವರ ಗ್ರಾಮದ ಬಾರಾಡಿ ಕುಮಾರಿ ಸೃಜನ ಕುಲಾಲ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಸರಕಾರಿ ಪದವಿಪೂರ್ವ ಕಾಲೇಜು ಸಾಣೂರು ಇಲ್ಲಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿನಿಯಾಗಿದ್ದಾರೆ. ಇವರು ಕಾಂತಾವರ ಗ್ರಾಮದ ಬಾರಾಡಿ ಜಗದೀಶ್ ಕುಲಾಲ್ ಹಾಗೂ ಜ್ಯೋತಿ ಕುಲಾಲ್ ದಂಪತಿಗಳಿಗಳ ಪುತ್ರಿ. ಇವರಿಗೆ ಕರಾಟೆ ಶಿಕ್ಷಕ ಸತೀಶ್ ಬೆಳ್ಮಣ್ ಮ್ರಾನಲಿ ಶೆಟ್ಟಿ ಇವರು ತರಬೇತಿ ನೀಡಿರುತ್ತಾರೆ.

