ಕರಾಯ: ಧರ್ಮಸ್ಥಳದಿಂದ ಕೊಮೋಡ ವೀಲ್ ಚೈಯರ್‌ ವಿತರಣೆ

0
71

ಕರಾಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು, ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ಜಲಮಂಗಲ ಕಾರ್ಯಕ್ರಮದ ಅಡಿಯಲ್ಲಿ ಕೊಮೋಡ ವೀಲ್ ಚೈಯರನ್ನು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಜಗದೀಶ ಶೆಟ್ಟಿ ಮೈರ ಸೆ.14 ರಂದು ಕರಾಯದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ವಲಯಾಧ್ಯಕ್ಷರಾದ ರಾಜಶೇಖರ್ ರೈ, ನಿಕಟಪೂರ್ವ ಅಧ್ಯಕ್ಷರಾದ ರಘುರಾಮ್ ಶೆಟ್ಟಿ ವಲಯ ಮೇಲ್ವಿಚಾರಕರಾದ ವಿಶ್ವನಾಥ್ ಪೂಜಾರಿ ಸೇವಾ ಪ್ರತಿನಿಧಿಯಾದ ಸುಜಾತ ಒಕ್ಕೂಟದ ಕೋಶಾಧಿಕಾರಿಯಾದ ಬಾಲಕೃಷ್ಣ ಕುಲಾಲ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾದ ದಯಾನಂದ ಪಿ, ಹಾಗೂ ಮನೆಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here