ಕಾರ್ಗಿಲ್: ಪಾಕಿಸ್ತಾನ ದುಸ್ಸಾಹಸ ಮಾಡಿದಾಗಲೆಲ್ಲಾ ಸೋಲನ್ನು ಅನುಭವಿಸಿದೆ. ಅದು ಇತಿಹಾಸದಿಂದ ಯಾವುದೇ ಪಾಠಗಳನ್ನು ಕಲಿತಿಲ್ಲ. ಭಯೋತ್ಪಾದಕರಿಗೆ ಅದು ಆಶ್ರಯ ನೀಡುತ್ತಿದೆ ಎಂದು ಕಾರ್ಗಿಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕ್ ವಿರುದ್ಧ ವಾಗ್ದಾಳಿ ನಡೆಸಿದರು.
1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಯೋಧರು ಮಾಡಿದ ತ್ಯಾಗ ಅಮರ ಮತ್ತು ಕಾರ್ಗಿಲ್ ವಿಜಯ್ ದಿವಸ್ ರೂಪದಲ್ಲಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದು ಅವರು ತಿಳಿಸಿದರು.
ಬಳಿಕ ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನಡುವೆ ಎಲ್ಲಾ ಹವಾಮಾನದಲ್ಲೂ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿರುವ ಸುರಂಗ ನಿರ್ಮಾಣಕ್ಕಾಗಿ ಮೊದಲ ಸ್ಫೋಟ ನಡೆಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.