‘ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಎಲ್ಲಾ ಸೈನಿಕರ ಬಲಿದಾನವನ್ನು ನಾವು ಯಾರೂ ಮರೆಯುವಂತಿಲ್ಲ. ಅವರ ತ್ಯಾಗ, ಬಲಿದಾನಗಳೇ ನಮ್ಮದೇಶದ ಉಳಿವಿಗೆ ಕಾರಣ.ಅವರ ನೆನಪು ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು’ ಎಂದು ಭಾರತೀಯ ಸೇನೆಯ ಮಾಜಿ ಸೈನಿಕ ಸುಬೇದಾರ್ ಮೇಜರ್ ರಾಜೇಂದ್ರಾ ಜಿ.ಕೆ.ಪಿ ತಿಳಿಸಿದರು.ಶ್ರೀ ಮಹಾವೀರ ಕಾಲೇಜಿನ ಐಕ್ಯೂಎಸಿ ಹಾಗೂ ಎನ್ಸಿಸಿ ಘಟಕ ಜಂಟಿಯಾಗಿ ಆಯೋಜಿಸಿದ ಕಾರ್ಗಿಲ್ ವಿಜಯ ದಿವಸದ 25 ನೇ ವರ್ಷಾಚರಣೆ ಸಮಾರಂಭದಲ್ಲಿಅವರು ಮಾತನಾಡುತ್ತಾ ಕಾರ್ಗಿಲ್ ಯುದ್ಧದ ಕಾರಣ, ಪರಿಣಾಮಗಳನ್ನು ಒಳಗೊಂಡ ಸವಿವರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.ನಮ್ಮ ದೇಶದ ಸೈನಿಕರು ನಮ್ಮ ಹೆಮ್ಮೆ ಎಂಬುದಾಗಿ ಕರೆಕೊಟ್ಟರು.ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ವೆಂಕಟೇಶ್ ಕಾಮತ್ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಗಿಲ್ ಹುತಾತ್ಮ ಯೋಧರಿಗೆ ನುಡಿ ನಮನ ಸಲ್ಲಿಸಿದರು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಧಾಕೃಷ್ಣಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಹುತಾತ್ಮರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.
ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಂ.ರಮೇಶ್ ಭಟ್, ಜೆಯುಒ ಪ್ರಣೀಶ್ ಉಪಸ್ಥಿತರಿದ್ದರು. ಕೆಡೆಟ್ ಶ್ರೇಯಾ ಶೆಟ್ಟಿ ಅತಿಥಿಗಳ ಪರಿಚಯ ಮಾಡಿದರು.ಕೆಡೆಟ್ ಸಚಿನ್ ಸ್ವಾಗತಿಸಿ, ಕೆಡೆಟ್ರಿತೇಶ್ ವಂದಿಸಿದರು.ಸಾರ್ಜೆಂಟ್ ಸನ್ನಿಧಿ ಕಾರ್ಯಕ್ರಮ ನಿರೂಪಿಸಿದರು.
ಮಹಾವೀರ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್
RELATED ARTICLES