Tuesday, May 13, 2025
Homeಸುರತ್ಕಲ್ಜು.26ರಂದು ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಜು.26ರಂದು ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುರತ್ಕಲ್: ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ಆಶ್ರಯದಲ್ಲಿ ಜು.26ನೇ ಶುಕ್ರವಾರ ಸಂಜೆ 7:30ಕ್ಕೆ ಸರಿಯಾಗಿ ಕಾರ್ಗಿಲ್ ವಿಜಯ ದಿವಸ್ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಹಾಗೂ ಹಣತೆ ಮೆರವಣಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಹುತಾತ್ಮ ಕ್ಯಾ.ಎಂ.ವಿ.ಪ್ರಾಂಜಲ್ ಶೌರ್ಯಚಕ್ರ ವೇದಿಕೆ ಸುರತ್ಕಲ್ ಜಂಕ್ಷನ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಿಂದ ಹಣತೆ ಮೆರವಣಿಗೆ ನಡೆಯಲಿದ್ದು ಇಡ್ಯಾ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಐ. ರಮಾನಂದ ಭಟ್ ಉದ್ಘಾಟನೆ ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಸೇನಾಧಿಕಾರಿ ಸೇನಾ ಮೆಡಲ್ ಪುರಸ್ಕೃತ ಕರ್ನಲ್ ರಾಜೇಶ್ ಹೊಳ್ಳ ಅವರು ವಹಿಸಲಿದ್ದು ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಕಡಂಬೋಡಿ ಮಹಾಬಲ ಪೂಜಾರಿ, ಯಶ್ ಪಾಲ್ ಸಾಲಿಯಾನ್, ಸಂಘಟನೆ ಉಪಾಧ್ಯಕ್ಷ ಸಾರ್ಜಂಟ್ ಶ್ರೀಕಾಂತ್ ಶೆಟ್ಟಿ ಬಾಳ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular