ಬಂಟ್ವಾಳ:ಇಲ್ಲಿನ ಕಾರಿಂಜ ಯಕ್ಷಾವಾಸ್ಯಮ್ ಇದರ ವತಿಯಿಂದ ಚತರ್ಥ ವಾರ್ಷಿಕೋತ್ಸವ ಕಾರ್ಯಕ್ರಮ ಕಾಡಬೆಟ್ಟು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಭಾನುವಾರ ನಡೆಯಿತು. ಡಿ.8ರಂದು ನಡೆಯಿತು. ಕಾರಿಂಜ ಕ್ಷೇತ್ರದ ಮಾಜಿ ರ್ಮದಶರ್ಿ ಪಚ್ಚಾಜೆಗುತ್ತು ಜಿನರಾಜ ಆರಿಗ ಕರ್ಯಕ್ರಮ ಉದ್ಘಾಟಿಸಿದರು.
ಪುಂಜಾಲಕಟ್ಟೆ ಕರ್ನಾಟ ಪಬ್ಲಿಕ್ ಸ್ಕೂಲ್ ಉಪ ಪ್ರಾಂಶುಪಾಲ ಬಿ.ಉದಯ ಕುಮಾರ್ ಜೈನ್ ಕರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ವೇಳೆ ಹಿರಿಯ ಮದ್ದಳೆಗಾರ ಹರಿನಾರಾಯಣ ಬೈಪಡಿತ್ತಾಯ ಮತ್ತು ಹಿರಿಯ ಮಹಿಳಾ ಭಾಗವತೆ ಲೀಲಾವತಿ ಬೈಪಡಿತ್ತಾಯ ಇವರಿಗೆ ‘ಯಕ್ಷವಾಸ್ಯಮ್ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಚೆಂಡೆವಾದಕ ಚಂದ್ರಶೇಖರ ಭಟ್ ಕೊಂಕಣಾಜೆ ಅಭಿನಂದನಾ ಭಾಷಣ ಮಾಡಿದರು. ಪ್ರತಿಭಾನ್ವಿತ ವಿದ್ಯಾರ್ಥಿನಿ ಸುಭೀಕ್ಷಾ ಇವರನ್ನು ಅಭಿನಂದಿಸಲಾಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್ ಶುಭ ಹಾರೈಸಿದರು. ಕಾರಿಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಮಡಂತ್ಯಾರು ಜೆಸಿಐ ನಿಕಟಪರ್ವ ಅಧ್ಯಕ್ಷ ಅಶೋಕ್ ಗುಂಡಿಯಲ್ಕೆ, ಶ್ರುತಾಂಜನ್ ಜೈನ್ ಅಲಂಪುರಿ ಗುತ್ತು , ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರ ಗೌರವಾಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀನಾರಾಯಣ ರ್ಮ, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ ಮತ್ತಿತರರು ಇದ್ದರು.
ಜಯರಾಮ ಭಟ್ ಸ್ವಾಗತಿಸಿ, ದೇವದಾಸ ಶೆಟ್ಟಿ ಅಭಿನಂದನಾ ಪತ್ರ ವಾಚಿಸಿದರು. ಸಂಚಾಲಕಿ ಸಾಯಿಸುಮಾ ಎಂ.ನಾವಡ ಕಾರಿಂಜ ವಂದಿಸಿದರು. ರತ್ನ ದೇವ್ ಪುಂಜಾಲಕಟ್ಟೆ ಕರ್ಯಕ್ರಮ ನಿರೂಪಿಸಿದರು.
ಯಕ್ಷ ವಿದ್ಯಾರ್ಧಿಗಳಿಂಧ ಗಳಿಂದ ಯಕ್ಷಗಾನ ಪ್ರಸಂಗ, ಭಾಗವತಿಕೆ, ಯಕ್ಷಗಾನ, ಮಹಿಳಾ ಕಲಾವಿದರಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ಪೂರ್ಣಿಮಾ ಯತೀಶ್ ರೈ ನಿರ್ದೆಶನದಲ್ಲಿ ‘ವೀರಮಣಿ ಕಾಳಗ’ ಯಕ್ಷಗಾನ ಪ್ರದರ್ಶನಗೊಂಡಿತು.
ಕಾರಿಂಜ: ಯಕ್ಷಾವಾಸ್ಯಮ್ ವಾರ್ಷಿಕೋತ್ಸವ, ಹರಿ ಲೀಲಾ ದಂಪತಿಗೆ ಪ್ರಶಸ್ತಿ ಪ್ರದಾನ
RELATED ARTICLES