ಕಾರ್ಕಳ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಆಶ್ರಯದಲ್ಲಿ ಕಾರ್ಕಳ ಪುರಸಭೆ ಹಾಗೂ ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಹಾಗೂ ಅದಾಲತ್ ಕಾರ್ಯಕ್ರಮವು ಸೆ. 12 ರಂದು ಮಧ್ಯಾಹ್ನ 3-00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯಲಿದೆ.
ಸಮಾವೇಶವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉದ್ಘಾಟಿಸಲಿದ್ದಾರೆ ಹಲವು ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

