ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣ ನಯನ ಸಭಾಂಗಣದಲ್ಲಿ ನಾಟ್ಯಮಯೂರಿ ನೃತ್ಯ ಸಂಸ್ಥೆ (ಕೊಡಗು) ಆಯೋಜಿಸಿದ ಭಾರತ ಭೂಷಣ ಮತ್ತು ಕರುನಾಡಭೂಷಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಧನ್ವಿ ಜೆ ರೈ ಯವರನ್ನು ಕರುನಾಡಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವ ಅಧ್ಯಕ್ಷ ಡಾ ಕೆಂಚನೂರು ಶಂಕರ, ವಿದುಷಿ ಪ್ರೇಮಾಂಜಲಿ ಆಚಾರ್ಯ, ಶ್ರೀ ತೋತಾಪುರಿ ಸೋಮಶೇಖರ ಗುರೂಜಿ, ವಾಣಿಜ್ಯೋದ್ಯಮಿ ಹಾಗೂ ಕೆಪಿಸಿಸಿ ಸಂಯೋಜಕ (ಸಿಎಂ ಪಿ ಎಸ್ ) ಶ್ರೀ ಮಂಜುನಾಥ ಶೆಟ್ಟಿ, ಬೆಂಗಳೂರು, ಬಂಟರ ಸಂಘದ ಉಪಾಧ್ಯಕ್ಷೆ ಶ್ರೀಮತಿ ಕಾಂತಿ ಶೆಟ್ಟಿ, ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಜೆ ರೈ, ಅಂತರಾಷ್ಟ್ರೀಯ ಚೆಸ್ ತರಬೇತುದಾರ ಮುನಿರಾಜು ಹಾಗೂ ಇತರರು ಉಪಸ್ಥಿತರಿದ್ದರು.