Saturday, April 19, 2025
Homeರಾಷ್ಟ್ರೀಯಅಬಕಾರಿ ನೀತಿ ಕೇಸ್ | ಕೇಜ್ರಿವಾಲ್‌ ಅವರೇ ಹಗರಣದ ಮುಖ್ಯ ಸಂಚುಕೋರ: ಇ.ಡಿ. ದೋಷಾರೋಪಪಟ್ಟಿಯಲ್ಲಿ ಆರೋಪ

ಅಬಕಾರಿ ನೀತಿ ಕೇಸ್ | ಕೇಜ್ರಿವಾಲ್‌ ಅವರೇ ಹಗರಣದ ಮುಖ್ಯ ಸಂಚುಕೋರ: ಇ.ಡಿ. ದೋಷಾರೋಪಪಟ್ಟಿಯಲ್ಲಿ ಆರೋಪ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಲಂಚದ ರೂಪದಲ್ಲಿ ಪಡೆದ 100 ಕೋಟಿ ರೂ. ಹಣದಲ್ಲಿ ಕೆಲವು ಭಾಗವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಸ್ವತಃ ಬಳಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.
ಕೇಜ್ರಿವಾಲ್‌ ಗೋವಾದ ಐಶಾರಾಮಿ ಹೋಟೆಲ್‌ನಲ್ಲಿ ತಂಗಲು ಈ ಹಣ ಬಳಕೆ ಮಾಡಿದ್ದರು ಎಂದು ಆರೋಪಪಟ್ಟಿಯಲ್ಲಿ ಆರೋಪಿಸಲಾಗಿದೆ.
ಅಬಕಾರಿ ನೀತಿಗೆ ಸಂಬಂಧಿಸಿ ದೆಹಲಿ ಸರ್ಕಾರ ಸಚಿವರ ಗುಂಪು ರಚಿಸಿದ್ದೇ ಒಂದು ವಂಚನೆಯಾಗಿದೆ. ಅರವಿಂದ ಕೇಜ್ರಿವಾಲ್‌ ಅವರೇ ಈ ಹಗರಣದ ಮುಖ್ಯ ಸಂಚುಕೋರ. ಸಚಿವರು ಹಾಗೂ ಆಮ್‌ ಆದ್ಮಿ ಪಕ್ಷದ ಮುಖಂಡರು ಹಾಗೂ ಇತರ ಕೆಲವರೊಂದಿಗೆ ಕೈ ಜೋಡಿಸಿ ಈ ಅಕ್ರಮ ಎಸಗಿದ್ದಾರೆ ಎಂದು ಇಡಿ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಕುರಿತ ವಿಶೇಷ ನ್ಯಾಯಾಲಯವು ಪ್ರಾಸಿಕ್ಯೂಶನ್‌ ಮೇ 17ರಂದು ಸಲ್ಲಿಸಿರುವ ದೂರನ್ನು ಮಂಗಳವಾರ ಪರಿಗಣನೆಗೆ ತೆಗೆದುಕೊಂಡಿದ್ದು, ಕೇಜ್ರಿವಾಲ್‌ ಅವರನ್ನು ಜು. 12ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನಿರ್ದೇಶಿಸಿದೆ.

RELATED ARTICLES
- Advertisment -
Google search engine

Most Popular