ಮಂಗಳೂರು: ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕವು ಅಸ್ತಿತ್ವಕ್ಕೆ ಬಂದಿದ್ದು ಈ ಘಟಕದ ಪದಗ್ರಹಣ ಕಾರ್ಯಕ್ರಮವು 18 4 2025 ರಂದು ಜಿಲ್ಲೆಯ ಕಿನ್ನಿಗೋಳಿಯಲ್ಲಿ ಯುಗಪುರುಷ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಪದಗ್ರಹಣದ ಜೊತೆಗೆ ಪ್ರಶಸ್ತಿ ಪ್ರಧಾನ,ಪುಸ್ತಕ ಬಿಡುಗಡೆ ಮತ್ತು ಚುಟುಕು ಕವಿ ಗೋಷ್ಠಿಯನ್ನು ಏರ್ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2025 ಇದನ್ನು ಸಾಧಕ ಗಣ್ಯರಿಗೆ ಪ್ರದಾನ ಮಾಡಲಾಗುವುದೆಂದು ಸ್ಥಾಪಕ ಅಧ್ಯಕ್ಷರಾದ ವಾಮನ ರಾವ್ ಬೇಕಲ್ ತಿಳಿಸುತ್ತಾ ಸಾಹಿತ್ಯ ಅಭಿಮಾನಿಗಳಿಗೆ ಸ್ವಾಗತ ಕೋರಿದ್ದಾರೆ.