Tuesday, May 13, 2025
Homeಮುಲ್ಕಿಕಿನ್ನಿಗೋಳಿ: ಅವೈಜ್ಞಾನಿಕ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ; ಹೂತು ಹೋದ ಲಾರಿ; ಬಿರುಕು ಬಿಟ್ಟ...

ಕಿನ್ನಿಗೋಳಿ: ಅವೈಜ್ಞಾನಿಕ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ; ಹೂತು ಹೋದ ಲಾರಿ; ಬಿರುಕು ಬಿಟ್ಟ ರಾಜ್ಯ ಹೆದ್ದಾರಿ

ಮುಲ್ಕಿ:ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಪುನರೂರು,ಕೆರೆಕಾಡು, ಪದ್ಮನ್ನೂರು ಕಡೆಗಳಲ್ಲಿ ಅಮೃತ್- 2 ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ಸೋಮವಾರ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ರಸ್ತೆ ಅವ್ಯವಸ್ಥೆಗಳ ಆಗರವಾಗಿ ಪರಿಣಮಿಸಿದೆ.
ಕಿನ್ನಿಗೋಳಿ ಪದ್ಮನೂರು ಬಳಿ ಲಾರಿಯೊಂದು ರಸ್ತೆ ಬದಿಯಲ್ಲಿ ಇನ್ನೊಂದು ವಾಹನಕ್ಕೆ ಸೈಡ್ ಕೊಡಲು ಹೋಗಿ ಹೂತು ಹೋಗಿದೆ, ಹೆದ್ದಾರಿಯ ಹೊಸ ಕಾವೇರಿ ಬಳಿ ರಸ್ತೆಯ ಅಂಚು ಬಾಯಿ ಬಿಟ್ಟು ಅಪಾಯಕಾರಿಯಾಗಿ ಪರಿಣಮಿಸಿದೆ.


ಆದರೂ ಅವೈಜ್ಞಾನಿಕ ರೀತಿಯಲ್ಲಿ ಎಸ್ ಕೋಡಿ ಬಳಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು ಸ್ಥಳೀಯರು ಮುಲ್ಕಿ ತಹಶೀಲ್ದಾರ್ ಗೆ ದೂರು ನೀಡಿದ್ದಾರೆ.
ಕೂಡಲೇ ಮುಲ್ಕಿ ತಹಶಿಲ್ದಾರ್ ಶ್ರೀಧರ್ ಸ್ಥಳಕ್ಕೆ ಆಗಮಿಸಿ ಪೈಪ್ ಲೈನ್ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದು ವೈಜ್ಞಾನಿಕವಾಗಿ ಕಾಮಗಾರಿ ನಡೆಸದಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ ಹಾಗೂ ಬಿರುಕು ಬಿಟ್ಟಿರುವ ರಸ್ತೆಯನ್ನು ಕೂಡಲೇ ದುರಸ್ತಿ ಪಡಿಸಬೇಕು ಹಾಗೂ ಮಳೆ ಬರುವಾಗ ಮುಂಜಾಗರೂಕತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಈ ಸಂದರ್ಭ ಮುಲ್ಕಿ ತಾಲೂಕು ಪ್ರಭಾರ ಕಂದಾಯ ನಿರೀಕ್ಷಕ ಮೋಹನ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular