ಮೂಡುಬಿದಿರೆ: ಇಲ್ಲಿನ ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಬುಧವಾರ ನಡೆಯಿತು. ಬೆಳಿಗ್ಗೆ ನಾಗದೇವರಿಗೆ ಪಂಚಾಮೃತ ಅಭಿಷೇಕ, ಗಣಪತಿ ಗಣಹೋಮ, ಕ್ಷೇತ್ರದಲ್ಲಿ ನವಕ ಹೋಮ, ಬಳಿಕ ವೀರಮಾರುತಿ ದೇವರ ಸನ್ನಿಧಿಯಲ್ಲಿ ವಾಯುಸ್ತುತಿ ಪುನಶ್ಚರಣ, ಸಾನಿಧ್ಯ ಕಲಶಾಭಿಷೇಕ, ದುರ್ಗಾಪರಮೇಶ್ವರಿ ದೇವರ ಸನ್ನಿಧಿಯಲ್ಲಿ ಚಂಡಿಕಾಯಾಗ ದೇವಳದ ಪ್ರಧಾನ ಅರ್ಚಕ ದೇವಳದ ಪ್ರಧಾನ ಅರ್ಚಕ ದತ್ತಾತ್ರೇಯ ಭಟ್ ನೇತೃತ್ವದಲ್ಲಿ ಮಹಾಪೂಜೆ, ಪಲ್ಲಕ್ಕಿ ಉತ್ಸವ ನಡೆಯಿತು.
ಶ್ರೀ ಕ್ಷೇತ್ರ ಪಾವಂಜೆ ಯಕ್ಷಗಾನ ಮಂಡಳಿಯಿಂದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನಗೊಂಡಿತು. ದೇವಸ್ಥಾನದ ಆಡಳಿತ ಮೊಕೇಸ್ತರ ಉದಯ ಕುಮಾರ್ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ, ಹೆಗ್ಗಡೆ ಯುವ ಘಟಕದ ಅಧ್ಯಕ್ಷ ಪ್ರಮೋದ್ ಹೆಗ್ಡೆ, ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಎಸ್. ಹೆಗ್ಡೆ, ಮುಂಬಯಿ ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ಮನೋಜ್ ಕುಮಾರ್ ಹೆಗ್ಡೆ, ಬೆಂಗಳೂರು ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.