ಚೆನ್ನೈ: ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ಕ್ಯಾಂಟರ್ನಲ್ಲಿದ್ದ ನಾಲ್ವರು ಮತ್ತು ಬಸ್ ಚಾಲಕ ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದೆ.
ಈ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದವರಾದ ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತಪಟ್ಟವರಾಗಿದ್ದಾರೆ. ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ನಲ್ಲೂರು ಗ್ರಾಮದ ಸರಸ್ವತಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್ಆರ್ಟಿಸಿ ಬಸ್ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಹೋಗಿ ವಾಪಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು. ನಿನ್ನೆ ಬುಧವಾರ ರಾತ್ರಿ ತಮಿಳುನಾಡಿನ ರಾಣಿಪೇಟೆ ಬಳಿ ಕೆಎಸ್ಆರ್ಟಿಸಿ ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ.