Saturday, April 26, 2025
Homeಬೆಳಗಾವಿಕೆಎಸ್‌ಆರ್‌ಟಿಸಿ ಬಸ್ ಮೆಕ್ಯಾನಿಕ್ ಬಸ್‌ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ

ಕೆಎಸ್‌ಆರ್‌ಟಿಸಿ ಬಸ್ ಮೆಕ್ಯಾನಿಕ್ ಬಸ್‌ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ

ಬೆಳಗಾವಿ: ಕೆಎಸ್‌ಆರ್‌ಟಿಸಿ ಬಸ್ ಮೆಕ್ಯಾನಿಕ್ ಬಸ್‌ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕೇಶವ ಕಮಡೊಳಿ (57) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದ ಮೃತ ದುರ್ದೈವಿ, ಕೆಎಸ್‌ಆರ್‌ಟಿಸಿ ಬಸ್ ವಾಶಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಬೆನ್ನು ನೋವಿನಿಂದ ಬಳಲುತ್ತಿದ್ದ ಕೇಶವನನ್ನು ಅಧಿಕಾರಿಗಳು ಅರಿತ್ತಿದ್ದರೂ ಪಂಚರ್ ಕೆಲಸಕ್ಕೆ ಬದಲಾಯಿದ್ದರು ಎನ್ನಲಾಗಿದೆ. ಡಿಪೋ ಮ್ಯಾನೇಜರ್ ಲಿಂಗರಾಜ ಲಾಠಿ ಕೇಶವ ಅವರ ಡ್ಯೂಟಿ ಬದಲಿಸದಂತೆ ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್ ಅವರಿಗೆ ಮನವಿ ಮಾಡಿದ್ದರು. ಆದರೂ ಅದನ್ನು ಲೆಕ್ಕಿಸದೆ ಡ್ಯೂಟಿ ಬದಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಡ್ಯೂಟಿ ಬದಲಿಸಿದ್ದಕ್ಕೆ ಮತ್ತು ಕೆಲಸದ ಒತ್ತಡ ತಡೆದುಕೊಳ್ಳಲು ಆಗದೆ ಕೇಶವ ಕಮಡೊಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ವಿರುದ್ಧ ಮೃತ ಕೇಶವ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಶವ್‌ರನ್ನು ಮಾನಸಿಕ ಅಸ್ವಸ್ಥ ಎಂದ ಅಧಿಕಾರಿಗಳನ್ನು ಕುಟುಂಬಸ್ಥರು ತರಾಟೆ ತೆಗೆದುಕೊಂಡಿದ್ದಾರೆ. “ಯಾವ ಆಧಾರದಲ್ಲಿ ಮಾನಸಿಕ ಅಸ್ವಸ್ಥ ಎಂದು ಹೇಳುತ್ತಿದ್ದೀರಿ? ಹುಷಾರಿಲ್ಲ ಡ್ಯೂಟಿ ಬದಲಿಸಬೇಡಿ ಎಂದು ಮನವಿ ಮಾಡಿದ್ದೆವು. ಆದರೆ, ಈಗ ಮಾನಸಿಕ ಅಸ್ವಸ್ಥ ಅಂತ ಸುಳ್ಳು ಹೇಳಿದ್ದೀರಿ. ನ್ಯಾಯ ಸಿಗುವವರೆಗೂ ಶವ ತೆಗೆದುಕೊಂಡು ಹೋಗುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಘಟನಾ ಸ್ಥಳಕ್ಕೆ ಬೆಳಗಾವಿ ಮಾರ್ಕೆಟ್ ಠಾಣೆಯಲ್ಲಿ ಈ ಘಟನೆ ಕುರಿತು ಪ್ರಕರಣ ದಾಖಲಾಗಿದೆ. ಮಾರ್ಕೆಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular